ಕಲ್ಲಡ್ಕ

ವೈರಿಗಳ ಎದುರಿಸುವ ತಾಕತ್ತು ಬರಲಿ

ಬಂಟ್ವಾಳ: ಹಿಂದೂ ಸಮಾಜ ರಕ್ಷಿಸುವ ನಿಟ್ಟಿನಲ್ಲಿ ವೈರಿಗಳನ್ನು ಎದುರಿನಿಂದಲೇ ಎದುರಿಸುವ ತಾಕತ್ತು ಹಿಂದೂ ಸಮಾಜದ ಯುವಕರಿಗೆ ಬರಬೇಕು, ಹಿಂದೂ ಸಮಾಜವನ್ನು ರಕ್ಷಣೆ ಮಾಡುವ ಪುಣ್ಯದ ಕೆಲಸಕ್ಕೆ ಮಾನಸಿಕವಾಗಿ ಸಿದ್ಧರಾಗಬೇಕು ಎಂದು ಡಾ. ಪ್ರಭಾಕರ ಭಟ್ ಕರೆ ನೀಡಿದ್ದಾರೆ.

ಮಾಣಿ ಘಟಕ ಉಳ್ಳಾಲು ಶಾಖೆಯ ಪದಾಧಿಕಾರಿಗಳು

ಶಂಭುಗದಲ್ಲಿ ನಡೆದ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ಮಾಣಿ ಘಟಕ ಶ್ರೀ ಉಳ್ಳಾಲ್ತಿ ಶಾಖೆಯ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹಿಂದೂ ಧರ್ಮ ಜಗತ್ತಿನಲ್ಲಿರುವ ಏಕೈಕ ಧರ್ಮ. ಅದೊಂದು ಜೀವನ ಪದ್ದತಿ. ತನ್ನ ಸಂಸ್ಕೃತಿ, ದೇಶ ರಕ್ಷಣೆಗಾಗಿ ಹೋರಾಡಿದ ಮಹಿಳೆಯರಿದ್ದರೆ ಅದು ಭಾರತದಲ್ಲಿ ಮಾತ್ರ ಎಂದರು. ಹಿಂದೂ ಸಮಾಜದ ತಾಕತ್ತನ್ನು ಮತ್ತೆ ನೆನಪಿಸುವ ಕೆಲಸವನ್ನು ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಮಾಡುತ್ತದೆ. ನ್ಯಾಯ, ಧರ್ಮ, ಸತ್ಯಕ್ಕಾಗಿ ಹೋರಾಡಲು ಯಾರಿಗೂ ಭಯ ಪಡಬೇಕಾಗಿಲ್ಲ ಎಂದರು.

ಜಾಹೀರಾತು

ಬಜರಂಗದಳದ ದಕ್ಷಿಣ ಪ್ರಾಂತ ಸಂಚಾಲಕ ಶರಣ್ ಪಂಪ್ವೆಲ್ ನೂತನ ಘಟಕವನ್ನು ಉದ್ಘಾಟಿಸಿ ಮಾತನಾಡಿ ಶ್ರೀ ಕೃಷ್ಣ ಮಾಡಿದ ಕೆಲಸವನ್ನು ಬಜರಂಗದಳ ಹಾಗೂ ವಿಶ್ವಹಿಂದೂ ಪರಿಷತ್ ಇಂದು ಮಾಡುತ್ತಿದ್ದು ಈ ನಿಟ್ಟಿನಲ್ಲಿ ದೇಶಾದ್ಯಂತ ಯುವಕರನ್ನು ಸಂಘಟಿಸುತ್ತಿದೆ ಎಂದರು.

ದೇಶದಲ್ಲಿ 65 ಸಾವಿರಕ್ಕಿಂತಲೂ ಅಧಿಕ ಶಾಖೆಗಳಿದ್ದು 17 ಲಕ್ಷ ಕಾರ್ಯಕರ್ತರಿದ್ದಾರೆ. ಕರ್ನಾಟಕ್ಲಲಿಯೇ 700 ಘಟಕಗಳಿದ್ದು 20 ಸಾವಿರ ಕಾರ್ಯಕರ್ತರು ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದರು.

ವಿಶ್ವ ಹಿಂದೂ ಪರಿಷತ್ನ ಪುತ್ತೂರು ಜಿಲ್ಲಾ ಅಧ್ಯಕ್ಷ ಡೀಕಯ್ಯ ಪೆರೋಡಿ ನೂತನ ಪದಾಧಿಕಾರಿಗಳಿಗೆ ಜವಬ್ದಾರಿ ಹಂಚಿದರು. ವಿಎಚ್ಪಿ ದ.ಕ. ಜಿಲ್ಲಾಧ್ಯಕ್ಷ ಜಗದೀಶ ಶೇಣವ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ವೇದಿಕೆಯಲ್ಲಿ ಸುದೇಶ್, ಕೊರಗಪ್ಪ, ದಯಾನಂದ ಇದ್ದರು. ಲತೇಶ್ ಸ್ವಾಗತಿಸಿ, ನಿತೇಶ್ ವಂದಿಸಿದರು, ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago