ಬಂಟ್ವಾಳ

ಬಂಟ್ವಾಳ ಪುರಸಭೆಗೆ ಚುರುಕು ಮುಟ್ಟಿಸಿದ ಜಿಲ್ಲಾಧಿಕಾರಿ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಜಗದೀಶ್, ಬಂಟ್ವಾಳ ಪುರಸಭೆಗೆ ಸೋಮವಾರ ಸಂಜೆ ಭೇಟಿ ನೀಡಿ, ಅಧಿಕಾರಿಗಳ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು.

ಈ ಸಂದರ್ಭ ಪುರಸಭಾ ವ್ಯಾಪ್ತಿಗೊಳಪಡುವ ಪ್ರದೇಶದ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದ ಅವರು, ವಾರದೊಳಗೆ ಬಸ್ ಬೇ ಕುರಿತ ಸರ್ವೇ, ನದಿಗೆ ಅಕ್ರಮವಾಗಿ ತ್ಯಾಜ್ಯ ಎಸೆಯುವವರ ವಿರುದ್ಧ ಕಠಿಣ ಕ್ರಮ, ಅಕ್ರಮ ಕಟ್ಟಡಗಳು, ಅನಧಿಕೃತವಾಗಿ ಹಾಗೂ ನಿಯಮಬಾಹಿರವಾಗಿ ಕಟ್ಟಿದ ಕಟ್ಟಡಗಳ ಸರ್ವೇ ಹಾಗೂ ಅವುಗಳ ಮಾಲೀಕರಿಗೆ ನೋಟಿಸ್, ಎಲ್ಲ ಬಹುಮಹಡಿ ಕಟ್ಟಡಗಳ ಸೆಟ್ ಬ್ಯಾಕ್ ಕುರಿತ ಸರ್ವೇಗೆ ಆದೇಶಿಸಿದರು.

ಜಾಹೀರಾತು

ಬಿ.ಸಿ.ರೋಡ್ ನ ಪಾರ್ಕಿಂಗ್ ವ್ಯವಸ್ಥೆ, ಮಣಿಹಳ್ಳ ರಸ್ತೆ ಅಗಲೀಕರಣ, ಪಾಣೆಮಂಗಳೂರು ಅಕ್ರಮ ಕಟ್ಟಡ,  ಬಂಟ್ವಾಳ ಬೈಪಾಸ್ ನ್ನು ಖುದ್ದು ವೀಕ್ಷಿಸಿದ ಅವರು ಅಧಿಕಾರಿಗಳಿಗೆ ನಕ್ಷೆ ಪ್ರಕಾರ ಕಾರ್ಯಾಚರಿಸಲು ಹಾಗೂ ಯಾವುದೇ ಒತ್ತಡಗಳಿಗೆ ಮಣಿಯದೆ ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಲು ಸಲಹೆ ನೀಡಿದರು.

ಆದರೆ ತಪ್ಪು ವರದಿ ನೀಡಿದರೆ ಶಿಸ್ತು ಕ್ರಮ ಎದುರಿಸಬೇಕಾದೀತು ಎಂದು ಎಚ್ಚರಿಸಿದರು.

ಜಾಹೀರಾತು

ಸಹಾಯಕ ಕಮೀಷನರ್ ಗಾರ್ಗಿ, ಪುರಸಭೆ ಮುಖ್ಯಾಧಿಕಾರಿ ಕೆ.ಸುಧಾಕರ್, ಅಧ್ಯಕ್ಷ ರಾಮಕೃಷ್ಣ ಆಳ್ವ, ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಹಿರಿಯ ಸದಸ್ಯ ಎ.ಗೋವಿಂದ ಪ್ರಭು, ಸದಸ್ಯರಾದ ಇಕ್ಬಾಲ್ ಗೂಡಿನಬಳಿ, ಮಹಮ್ಮದ್ ಶರೀಫ್ ಮೊದಲಾದವರು ಇದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ