ಬಂಟ್ವಾಳ

ಬಂಟ್ವಾಳ ತಾಲೂಕು ಮಟ್ಟದ ಸಹಕಾರಿಗಳ ಸಮಾಲೋಚನೆ ಸಭೆ

ಬಂಟ್ವಾಳ: ಸಹಕಾರಿ ಸದಸ್ಯರಿಗೆ , ಠೇವಣಿದಾರರಿಗೆ ಮತ್ತು ಗ್ರಾಹಕರಿಗೆ ಚಳವಳಿ ಮೂಲಕ ಸಹಕಾರಿ ಕ್ಷೇತ್ರ  ಎಷ್ಟು ಸದೃಡವಾಗಿದೆ ಎನ್ನುವುದನ್ನು ತೋರಿಸುವ ಕೆಲಸ ಈ ಮೂಲಕ ನಡೆಯಬೇಕಿದೆ ಎಂದು ಎಸ್.ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜಾರಾಮ್ ಭಟ್  ಹೇಳಿದರು.

ಅವರು ಮಂಗಳುರಿನಲ್ಲಿ ನ.18ರಂದು ನಡೆಯುವ ರಾಜ್ಯ ಮಟ್ಟದ ಸಹಕಾರಿ ಸಪ್ತಾಹದ ಆಚರಣೆ ಬಗ್ಗೆ ಬಂಟ್ವಾಳ ಯಶವಂತ ವ್ಯಾಯಮ ಶಾಲೆಯಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಸಹಕಾರಿಗಳ ಸಮಾಲೋಚನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಜಾಹೀರಾತು

ಸಹಕಾರಿ ಶಕ್ತಿಯನ್ನು ಪ್ರದರ್ಶಿಸುವ ಮೂಲಕ , ಸಹಕಾರಿ ಹೋರಾಟವನ್ನು ಜನಮಾನಸದಲ್ಲಿ ಉಳಿಯುವಂತೆ ಮಾಡಬೇಕು ಅದಕ್ಕೆ ಎಲ್ಲಾ ಸಹಕಾರಿ ಕ್ಷೇತ್ರದ ಬಂಧುಗಳ ಸಹಕಾರ ಅತ್ಯಗತ್ಯವಾಗಿ ಬೇಕು ಎಂದರು.

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ , ದ.ಕ ಜಿಲ್ಲಾ ಸಹಾಕರಿ ಯೂನಿಯನ್ ಅಧ್ಯಕ್ಷ ಹರೀಶ್ ಅಚಾರ್ಯ ,ಬಂಟ್ವಾಳ ಸಹಾಕಾರಿ ಯೂನಿಯನ್ ಅಧ್ಯಕ್ಷ  ಜಿ ಆನಂದ , ಸಹಕಾರಿ ಸಂಘಗಳ ಮುಖ್ಯ ನಿರ್ವಾಹಾಣಾಧಿಕಾರಿಗಳ ಒಕ್ಕೂಟದ ಉಪಾಧ್ಯಕ್ಷ ಅಲ್ಬರ್ಟ ಡಿಸೋಜ . ಸಹಕಾರಿ ಅಧಿಕಾರಿಗಳಾದ ಎಚ್ ದೇವಾಡಿಗ, ತ್ರಿವೇಣಿರಾವ್, ವಲಯ ಮೇಲ್ವಿಚಾರಕಜರಾದ ಕೇಶವ ಕಿಣಿ ಮತ್ತು  ಯೋಗೀಶ್ ಉಪಸ್ಥಿತರಿದ್ದರು.

ಬಂಟ್ವಾಳ ಪಿಎಲ್‌ಡಿ ಬ್ಯಾಂಕಿನ ಅಧ್ಯಕ್ಷ ಸುದರ್ಶನ್ ಜೈನ್ ಸ್ವಾಗತಿಸಿ    ಮಂಗಳೂರು ಸಹಕಾರಿ ಸಂಘಗಳ ಉಪನಿಬಂಧಕ ಬಿಕೆ.ಸಲಿ ಪ್ರಸ್ತಾವನೆಗೈದರು, ಮಂಗಳೂರು ಸ್ಕಾಡ್ಸ್ ನ ಅಧ್ಯಕ್ಷ ರವೀಂದ್ರ ಕಂಬಳಿ ವಂದಿಸಿದರು, ಸುಭಾಶ್‌ಚಂದ್ರ ಜೈನ್ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts