ಬಂಟ್ವಾಳ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲಾ 7ನೇ ತರಗತಿ ವಿದ್ಯಾರ್ಥಿ ಆಕಾಶ್ ಅವರು 600 ಮೀ ಓಟ ಹಾಗೂ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಕಲ್ಲಡ್ಕದ ಶ್ರೀ ರಾಮ ವಿದ್ಯಾ ಕೇಂದ್ರದಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದಲ್ಲಿ ಈ ಪ್ರಶಸ್ತಿ ಲಭಿಸಿರುತ್ತದೆ. ದೈಹಿಕ ಶಿಕ್ಷಣ ಶಿಕ್ಷಕರಾದ ದಿನಕರ ಪೂಜಾರಿ ಹಾಗೂ ವಿಶಾಲಾಕ್ಷಿ ಅವರಿಂದ ತರಬೇತಿ ಪಡೆದಿರುವ ಆಕಾಶ್ ನೇರಳಕಟ್ಟೆ-ದಾಸಕೋಡಿ ನಿವಾಸಿ ಗಿರೀಶ್ ಮತ್ತು ಆಶಾಲತಾ ದಂಪತಿಗಳ ಪುತ್ರನಾಗಿರುತ್ತಾನೆ.