ಬಂಟ್ವಾಳ

ಪರನೀರು ಎಂಬಲ್ಲಿ ಮರಳು ಅಡ್ಡೆಗೆ ದಾಳಿ

ಬಂಟ್ವಾಳ: ತುಂಬೆ ಗ್ರಾಮದ ಪರನೀರು ಎಂಬಲ್ಲಿ ದಾಸ್ತಾನಿರಿಸಿದ್ದ ಮರಳು ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ಸುಮಾರು 40 ಲೋಡಿನಷ್ಟು ಅಕ್ರಮ ಮರಳನ್ನು ಮುಟ್ಟುಗೋಲು ಹಾಕಿದೆ.

ಜಿಲ್ಲಾಧಿಕಾರಿ ಡಾ. ಜಗದೀಶ್ ನಿರ್ದೇಶನದ ಮೇರೆಗೆ ತಹಶೀಲ್ದಾರ್ ಪುರಂದರ ಹೆಗ್ಡೆ ನೇತೃತ್ವದ ತಂಡ ಕಳೆದ ಮಧ್ಯೆ ರಾತ್ರಿ ಈ ದಾಳಿ ಕಾರ್ಯಾಚರಣೆ ನಡೆಸಿದೆ. ಇಲ್ಲಿನ ಮೋಹನ್ ರಾವ್ ಎಂಬವರಿಗೆ ಸೇರಿದ ಜಮೀನಿನಲ್ಲಿ ಮರಳು ದಾಸ್ತಾನಿಡಲಾಗಿತ್ತು. ಖಚಿತ ಮಾಹಿತಿ ಅನ್ವಯ ಬಂಟ್ವಾಳ ಗ್ರಾಮಾಂತರ ಪೊಲೀಸರ ಸಹಕಾರದೊಂದಿಗೆ ಈ  ಕಾರ್ಯಾಚರಣೆಯನ್ನು ನಡೆಸಲಾಗಿದೆ. ಈ ಬಗ್ಗೆ ಜಮೀನು ಮಾಲೀಕ ವಿರುದ್ಧ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು

ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕರಾದ ನವೀನ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕೆ., ಭೂ-ಗಣಿ ಇಲಾಖೆಯ ಗಿರೀಶ್ ಮೋಹನ್, ಗ್ರಾಮ ಕರಣಿಕರಾದ ಜನಾರ್ದನ್, ಯೋಗಾನಂದ, ರಾಜು, ರಾಜಶೇಖರ, ಬಸಪ್ಪ, ತಾಲೂಕು ಕಚೇರಿ ಸಿಬ್ಬಂದಿಗಳಾದ ಸದಾಶಿವ ಕೈಕಂಬ, ಶಿವಪ್ರಸಾದ್ ಅಮ್ಟೂರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ