46 ಸಾವಿರ ಮತದಾರರು, ಬಂಟ್ವಾಳ ಎಪಿಎಂಸಿಯ ನಿರ್ಣಾಯಕರು

  • ಬಗೆಹರಿಯದ ಮತದಾರರ ಪಟ್ಟಿ ಲೋಪದೋಷ
  •  ಕಾಂಗ್ರೆಸ್ – ಬಿಜೆಪಿ ಮಧ್ಯೆ ಪ್ರತಿಷ್ಠೆಯ ಕದನ
  •  ಅಭ್ಯರ್ಥಿಗಳ ಆಯ್ಕೆಯಲ್ಲಿ ಅಂತಿಮ ಕಸರತ್ತು

ಮತದಾರನ ಹೆಸರು: ಜಯರಾಮ ಶೆಟ್ಟಿ. ತಂದೆ ಹೆಸರು ಹೊನ್ನಮ್ಮ ಮಾರ್ಕ್ ಫೆರ್ನಾಂಡಿಸ್. ಮತದಾರ ಪಟ್ಟಿಯಲ್ಲಿರುವ ಇಂಥ ಲೋಪದೋಷಗಳು ಎದ್ದು ಕಾಣುತ್ತವೆ. ಪಟ್ಟಿಯಲ್ಲಿ ಇರುವವರು ಎಲ್ಲರೂ ಜೀವಂತವಾಗಿದ್ದಾರೋ ಎಂಬುದು ಖಚಿತಗೊಂಡಂತಿಲ್ಲ. ಬಂಟ್ವಾಳ ತಾಲೂಕು  ಎಪಿಎಂಸಿ ಚುನಾವಣೆಗೆ ಆಖಾಡ ಸಿದ್ಧವಾಗುತ್ತಿದೆ. 46 ಸಾವಿರ ಮತದಾರರು 12 ಸದಸ್ಯರನ್ನು ಚುನಾಯಿಸಲಿದ್ದಾರೆ.

%e0%b2%8f%e0%b2%aa%e0%b2%bf%e0%b2%8e%e0%b2%82%e0%b2%b8%e0%b2%bf

ಡಿಸೆಂಬರ್ 4ರಂದು ಚುನಾವಣೆ. ತಾಲೂಕಿನ ಪ್ರಮುಖ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹಣಾಹಣಿ.

ಜಾಹೀರಾತು

ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ನ.14 ನಾಮಪತ್ರ ಸಲ್ಲಿಕೆ ಕೊನೇ ದಿನ. 15ರಂದು ಪರಿಶೀಲನೆ. 18ರಂದು ವಾಪಸ್ ಪಡೆಯಲು ಕೊನೇ ದಿನ. ಡಿ.4ರಂದು ಬೆಳಗ್ಗೆ 8ರಿಂದ 4ವರೆಗೆ ಮತದಾನ. ಡಿ.6ರಂದು ಮತ ಎಣಿಕೆ.

ಒಟ್ಟು 12 ಸದಸ್ಯ ಬಲದ ಎಪಿಎಂಸಿಯಲ್ಲಿ ಕಳೆದ ಬಾರಿ ಬಿಜೆಪಿ 8, ಕಾಂಗ್ರೆಸ್ 4 ಸದಸ್ಯರನ್ನು ಹೊಂದಿತ್ತು.

ಈ ಚುನಾವಣೆ ಗ್ರಾ.ಪಂ.ಚುನಾವಣೆ ಮಾದರಿಯಲ್ಲಿ ಪಕ್ಷದ  ಚಿಹ್ನೆಯಡಿ ನಡೆಯುತ್ತಿಲ್ಲವಾದರೂ,ವಿವಿಧ ಪಕ್ಷದ  ಮುಖಂಡರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದರಿಂದ ಹಿಡಿದು ಪ್ರಚಾರದಲ್ಲೂ ಮುಂಚೂಣಿಯಲ್ಲಿರುತ್ತಾರೆ. ನೋಂದಾಯಿತ ಕೃಷಿಕರು, ವರ್ತಕರು ಮತದಾರರು.

ಜಾಹೀರಾತು

ಕ್ಷೇತ್ರಗಳು ಹೀಗಿವೆ.

  1. ಸಂಗಬೆಟ್ಟು (ಸಾಮಾನ್ಯ, ಮತದಾರರು-3997),
  2. ಚನ್ನೈತೋಡಿ (ಸಾಮಾನ್ಯ ಮಹಿಳೆ, ಮತದಾರರು-3903),
  3. ಅಮ್ಟಾಡಿ (ಹಿ.ವ.ಅ, ಮತದಾರರು-4715),
  4. ಕಾವಳಮೂಡೂರು (ಸಾಮಾನ್ಯ, ಮತದಾರರು-4346),
  5. ಕೊಳ್ನಾಡು (ಹಿ.ವ.ಬಿ.,ಮತದಾರರು-3890),
  6. ಅಳಕೆ(ಹಿ.ವ.ಬಿ.ಮಹಿಳೆ, ಮತದಾರರು-4054),
  7. ಕೆದಿಲ(ಅನುಸೂಚಿತ ಪಂಗಡ, ಮತದಾರರು-3946),
  8. ಮಾಣಿ(ಸಾಮಾನ್ಯ, ಮತದಾರರು-4768),
  9. ಕಡೇಶ್ವಾಲ್ಯ (ಸಾಮಾನ್ಯ , ಮತದಾರರು-3772),
  10. ಪಾಣೆಮಂಗಳೂರು (ಸಾಮಾನ್ಯ , ಮತದಾರರು-4004),
  11. ತುಂಬೆ (ಅನುಸೂಚಿತ ಜಾತಿ,ಮತದಾರರು-4402),
  12. ವರ್ತಕರ ಕ್ಷೇತ್ರ (ಮತದಾರರು-204)

 ಇಲ್ಲಿ ನೋಂದಾಯಿತ ವರ್ತಕರು ಯಾರೊಬ್ಬರು ಚುನಾವಣೆಗೆ ಸ್ಪಧಿ೯ಸಬಹುದು.

ಒಟ್ಟು 46001 ಮಂದಿ ತಮ್ಮಹಕ್ಕು ಚಲಾಯಿಸಲು ಅರ್ಹತೆ ಹೊಂದಿದ್ದಾರೆ.

ಜಾಹೀರಾತು

ತುಂಬೆ ಕ್ಷೇತ್ರಕ್ಕೆ ಕಾಂಗ್ರಸ್ ಬೆಂಬಲಿತ ಅಭ್ಯರ್ಥಿಯಾಗಿ ಪದ್ಮನಾಭ ನರಿಂಗಾನ ರವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಕೃಷಿಕರು, ವರ್ತಕರ ಅನುಕೂಲಕ್ಕಾಗಿ ಕೈಗೊಂಡ ಅಭಿವೃದ್ಧಿ ಕಾರ್ಯ ಮುಂದಿಟ್ಟು ಬಿಜೆಪಿ ತಮ್ಮ ಬೆಂಬಲಿತ ಅಭ್ಯಥಿ೯. ಪರ ಮತಯಾಚನೆ ಮಾಡಲಿದ್ದರೆ, ರಾಜ್ಯ ಸರಕಾರ ಕೃಷಿಕರಿಗೆ ಜಾರಿ ತಂದಿರುವ ಯೋಜನೆಯನ್ನು ಮುಂದಿಟ್ಟು ಕಾಂಗ್ರೆಸ್ ತಮ್ಮ ಬೆಂಬಲಿತರ ಪರ ಮತಯಾಚನೆ ಮಾಡಲಿದೆ.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈಯವರ ತವರು ಕ್ಷೇತ್ರವಾಗಿರುವುದರಿಂದ ಕಾಂಗ್ರೆಸ್ಸಿಗೆ ಈ ಚುನಾವಣೆ ಪ್ರತಿಷ್ಠೆ ಪ್ರಶ್ನೆಯಾದರೆ, ಬಿಜೆಪಿ ಈ ಬಾರಿಯೂ ಅಧಿಕಾರವನ್ನು ತಮ್ಮಲ್ಲೇ ಉಳಿಸಿಕೂಳ್ಳುವ ನಿಟ್ಟಿನಲ್ಲಿ ಪ್ರತಿಷ್ಠೆಯನ್ನಾಗಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
ಕಳೆದ 26 ವರ್ಷಗಳಿಂದ ಪತ್ರಕರ್ತನಾಗಿ ಹಲವು ದೈನಿಕಗಳಲ್ಲಿ ಮಂಗಳೂರು, ಮಣಿಪಾಲ ಮತ್ತು ಬಂಟ್ವಾಳಗಳಲ್ಲಿ ಕೆಲಸ ಮಾಡಿರುವ ಅನುಭವ ಇರುವ ಹರೀಶ ಮಾಂಬಾಡಿ, 2016ರಲ್ಲಿ www.bantwalnews.com ಆರಂಭಿಸಿದ್ದು, ಇದರ ಸಂಪಾದಕರೂ ಆಗಿದ್ದಾರೆ.

Be the first to comment on "46 ಸಾವಿರ ಮತದಾರರು, ಬಂಟ್ವಾಳ ಎಪಿಎಂಸಿಯ ನಿರ್ಣಾಯಕರು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*