ವಿಟ್ಲ

ಕನ್ಯಾನದಲ್ಲಿ ವ್ಯಕ್ತಿಗೆ ಹಲ್ಲೆ, ಪೋಲೀಸ್ ಬಂದೋಬಸ್ತ್

ಕನ್ಯಾನ: ಇಲ್ಲಿನ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ವ್ಯಕ್ತಿಯೋರ್ವರಿಗೆ ಮಾರಕಾಯುಧಗಳಿಂದ ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ.

ಕನ್ಯಾನ ಗ್ರಾಮದ ಶಿರಂಕಲ್ಲು ನಿವಾಸಿ ಅಬೂಬಕ್ಕರ್(58) ಹಲ್ಲೆಗೊಳಗಾದ ವ್ಯಕ್ತಿ.

ಜಾಹೀರಾತು

ಅವರೀಗ ಸಮುದಾಯಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕನ್ಯಾನದ ಚಂದ್ರಹಾಸ ಮತ್ತು ದಿನೇಶ ಅವರು ಬೈಕಿನಲ್ಲಿ ಅಂಗಡಿ ಸಮೀಪ ಆಗಮಿಸಿ, ಸಾಮಗ್ರಿ ಖರೀದಿ ನೆಪದಲ್ಲಿ ಮಾತನಾಡಿಸಿ, ಬಳಿಕ ಒಳನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಘಟನೆ ನಡೆದ ಕೂಡಲೇ ಸ್ಥಳದಲ್ಲಿ ಜನ ಸೇರಿದ ಸಂದರ್ಭ ಹಲ್ಲೆ ಮಾಡಿದವರುಪರಾರಿಯಾಗಿದ್ದಾರೆ. ಈ ಸಂದರ್ಭ ಕನ್ಯಾನ ಪೇಟೆಯಲ್ಲಿಯೂ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಬಹುದೆಂದು ಊಹಿಸಿದ ವಿಟ್ಲ ಪೊಲೀಸರು, ಅಂಗಡಿ ಮುಚ್ಚಿಸಿದರು.

ಕನ್ಯಾನ ಪಿಲಿಂಗುಳಿಯ ಯುವತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದ  ಅದೇ ಗ್ರಾಮದ ಶಿರಂಕಲ್ಲು ನಿವಾಸಿ ಸಮೀರ್ ಅವರ ತಂದೆ ಹಲ್ಲೆಗೊಳಗಾದವರು.

ಜಾಹೀರಾತು

ಘಟನೆ ಬಳಿಕ ಪರಿಸರದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಪ್ರಹಾರ ಮಾಡಬೇಕಾಯಿತು. ಪೊಲೀಸರು ಪರಿಸ್ಥಿತಿಯನ್ನು ರಾತ್ರಿ ವೇಳೆ ನಿಯಂತ್ರಣಕ್ಕೆ ತಂದಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಭೂಷಣ ಜಿ ಬೊರಸೆ, ಹೆಚ್ಚುವರಿ ಅಧೀಕ್ಷಕ ವೇದಮೂರ್ತಿ, ಬಂಟ್ವಾಳ ಸಹಾಯಕ ಅಧೀಕ್ಷಕ ರವೀಶ್ ಸಿ ಆರ್, ವೃತ್ತ ನಿರೀಕ್ಷಕ ಬಿ ಕೆ ಮಂಜಯ್ಯ, ಉಪನೀಕ್ಷಕ ಪ್ರಕಾಶ್ ದೇವಾಡಿಗ ಅವರು ಬೇಟಿ ನೀಡಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ