ವಿಟ್ಲ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎನ್ನೆಎಸ್ಸೆಸ್ ವಿದ್ಯಾರ್ಥಿಗಳ ಸಾಥ್

ಒಕ್ಕೆತ್ತೂರು ನದಿಗೆ ಸೇರುವ ತೊರೆಗಳಗಳಲ್ಲಿ ನೀರಿನ ಹರಿವು ಉತ್ತಮವಾಗಿದ್ದು, ಸದ್ಯ ಹರಿದು ಸಮುದ್ರ ಸೇರುತ್ತಿದೆ. ಇದಕ್ಕೆ ಮರಳಿನ ಅಣೆಕಟ್ಟು ನಿರ್ಮಿಸಿ ನೀರು ತಡೆಹಿಡಿಯುವುದರಿಂದ ಸಾಕಷ್ಟು ನೀರು ಲಭ್ಯವಾಗಲಿದೆ. ವಿದ್ಯಾರ್ಥಿಗಳ ಜತೆಗೆ ಊರಿನ ಉತ್ಸಾಹಿಗಳ ಸಹಕಾರದಲ್ಲಿ ಸುಮಾರು 8 ರಿಂದ 10 ಅಡಿ ಎತ್ತರದಲ್ಲಿ ಅಣೆಕಟ್ಟು ನಿರ್ಮಿಸಲು ಮುಂದಾಗಿದ್ದಾರೆ. ಇನ್ನೂ ಕೆಲವು ಕಡೆಗಳಲ್ಲಿ ಅಣಕಟ್ಟು ನಿರ್ಮಿಸುವ ಉದ್ದೇಶವನ್ನು ವಿಟ್ಲ ಪಪಂ ಹೊಂದಿದೆ.

  • ಕುಡಿಯುವ ನೀರಿಗಾಗಿ ತೊರೆಗೆ ಅಣೆಕಟ್ಟು ನಿರ್ಮಿಸಲು ಮುಂದಾದ ಪಪಂ

ವಿಟ್ಲ: ಒಂದೆಡೆ ಅಂತರ್ಜಲ ಮಟ್ಟ ಕುಸಿತ, ಇನ್ನೊಂದೆಡೆ ನೀರಿಗಾಗಿ ಈಗಲೇ ಪರದಾಟ ಆರಂಭದ ಮುನ್ಸೂಚನೆ.

ಜಾಹೀರಾತು

vit3

ಇಂಥ ಸನ್ನಿವೇಶದಲ್ಲೇ ವಿಟ್ಲ ಪಟ್ಟಣ ಪಂಚಾಯಿತಿ ತನ್ನ ವ್ಯಾಪ್ತಿಯಲ್ಲಿ ಇರುವ ತೊರೆ ನದಿಗೆ ಅಣೆಕಟ್ಟು ನಿರ್ಮಿಸುವ ಯೋಜನೆ ಹಾಕಿಕೊಂಡಿದೆ.

ಇದಕ್ಕೆ ವಿಟ್ಲ ವಿಠಲ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಾಥ್ ನೀಡಿದೆ. ಇಂತಹ ಕಾರ್ಯದಿಂದ ವಿಟ್ಲ ಪೇಟೆಯ ಭಾಗದಲ್ಲಿ ಶಾಶ್ವತವಾಗಿ ನೀರಿನ ಸಮಸ್ಯೆಯನ್ನು ನಿವಾರಿಸಬಹುದು ಎಂಬ ನಂಬಿಕೆ ಪಪಂನದ್ದು.

ಜಾಹೀರಾತು

ಕಳೆದ ಬೇಸಿಗೆಯಲ್ಲಿ ವಿಟ್ಲ ಪೇಟೆ ಭಾಗಕ್ಕೆ ನೀರಿನ ಅಭಾವ ಉಂಟಾಗಿ ಟ್ಯಾಂಕರ್ ಮೂಲಕ ನೀರು ಪೂರೈಗೆ ಲಕ್ಷಾಂತರ ರೂಪಾಯಿಯನ್ನು ಪಂಚಾಯಿತಿ ಆಡಳಿತ ವ್ಯಯಿಸಿದೆ. ಇದರಿಂದ ಎಚ್ಚೆತ ಆಡಳಿತ ಕೊಳವೆ ಬಾವಿಗಳಿಂದ ನದಿ – ತೊರೆಗಳ ನೀರಿಗೆ ಆದ್ಯತೆ ನೀಡುವ ಜತೆಗೆ ಹಳೆಯ ಮದಕ – ಕೆರೆ – ಬಾವಿಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಹಾಕಿಕೊಂಡಿತು.

vit2

ಸುಮಾರು 28 ನೀರಿನ ಟ್ಯಾಂಕ್ ಇದ್ದು, ಇದಕ್ಕೆ ಕೊಳವೆ ಭಾವಿ ಹಾಗೂ ನದಿಯ ಬಾವಿಗಳಿಂದ ನೀರು ತುಂಬಿಸಿ ವಿತರಣೆ ಮಾಡುವ ಕಾರ್ಯವಾಗುತ್ತಿದೆ. ವಿಟ್ಲದ ವನಭೋಜನ, ಕೂಟೇಲು, ಒಕ್ಕೆತ್ತೂರು, ಸಿ.ಪಿ.ಸಿ.ಆರ್.ಐ, ಚಂದಪ್ಪಾಡಿ(ಕಲ್ಲಕಟ್ಟ), ದೇವಸ್ಯ, ಕಾಯಾರ್ಮಾರ್ ಭಾಗದಲ್ಲಿ ಅಣೆಕಟ್ಟು ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದೆ. ಇದರಿಂದ ಭೂಮಿಯಲ್ಲಿ ತಗ್ಗಿದ ಅಂತರ್ಜಲದ ಮಟ್ಟವನ್ನು ಮೇಲೇರಿಸಬಹುದೆಂಬುದು ತಜ್ಞರ ಅಭಿಪ್ರಾಯ.

ಜಾಹೀರಾತು

ಪಂಚಾಯಿತಿಗೆ ಅನುದಾನದ ಕೊರತೆ ಇರುವುದರಿಂದ ಸಾರ್ವಜನಿಕರು ಹಾಗೂ ಉತ್ಸಾಹಿ ವಿದ್ಯಾರ್ಥಿ ಸಂಘಟನೆಯನ್ನೇ ಇದಕ್ಕೆ ಬಳಸಿಕೊಂಡು ಕಾಮಗಾರಿ ನಡೆಸುವ ಯೋಚನೆಯಲ್ಲಿ ಪಂಚಾಯಿತಿ ಇದ್ದು, ಇದಕ್ಕೆ ಉತ್ತಮ ಪ್ರತಿಕ್ರಿಯೆಯೂ ಲಭಿಸಿದೆ. ಈಗಾಗಲೇ ವಿದ್ಯಾರ್ಥಿಗಳ ತಂಡ ಕಾರ್ಯಪ್ರವೃತ್ತವಾಗಿದ್ದು, ಸುಮಾರು 800ಕ್ಕೂ ಅಧಿಕ ಮರಳಿನ ಗೋಣಿ ಚೀಲಗಳನ್ನು ಸಿದ್ದಪಡಿಸಿದೆ. ವಾರದೊಳಗೆ ಎಲ್ಲಾ ಅಣೆಕಟ್ಟುಗಳೂ ನಿರ್ಮಾಣವಾಗಿ ನೀರು ನಿಲ್ಲಿಸುವ ಕಾರ್ಯ ನಡೆಯಲಿದೆ.

ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ವಿಟ್ಲ, ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಸದಸ್ಯ ಮಂಜುನಾಥ ಕಲ್ಲಕಟ್ಟ ನೇತೃತ್ವದ ತಂಡ ನದಿ ನೀರುಗಳನ್ನು ಸಂಗ್ರಹ ಮಾಡಲು ಮುಂದಾಗಿದ್ದಾರೆ. ಇವರಿಗೆ ಬೆಂಬಲವಾಗಿ ವಿಟ್ಲ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಜಾನ್ ಡಿಸೋಜ, ವಿಠಲ ಪದವಿ ಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ ಕಾರ್ಯಕ್ರಮ ಅಧಿಕಾರಿ ಅಣ್ಣಪ್ಪ ಸಾಸ್ತಾನ ಅವರು ತಮ್ಮ ವಿದ್ಯಾರ್ಥಿಗಳ ತಂಡ ಈ ಕಾರ್ಯಗಳಿಗೆ ವಿನಿಯೋಗಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ವಿಟ್ಲ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಎನ್ನೆಎಸ್ಸೆಸ್ ವಿದ್ಯಾರ್ಥಿಗಳ ಸಾಥ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*