ಬಂಟ್ವಾಳ

ಪ್ರಾಮಾಣಿಕತೆ ಮೆರೆದ ನೀರಪಾದೆ ಹಮೀದ್

ಬಂಟ್ವಾಳ: ಬಾಳ್ತಿಲ ಗ್ರಾಮ, ನೀರಪಾದೆಯ ಹಮೀದ್ ಈಗ ಬಂಟ್ವಾಳದಾದ್ಯಂತ ಸುದ್ದಿಯಾಗಿದ್ದಾರೆ.

ಇದಕ್ಕೆ ಕಾರಣ ಅವರ ಪ್ರಾಮಾಣಿಕತೆ. ನವೆಂಬರ್ 13ರಂದು ಬೆಳಗ್ಗೆ ಹಮೀದ್ ನಡೆದುಕೊಂಡು ಹೋಗುತ್ತಿದ್ದಾಗ, ಪ್ಲಾಸ್ಟಿಕ್ ಪೇಪರ್ ನಲ್ಲಿ ಸುತ್ತಿದ ವಸ್ತುವೊಂದು ದೊರಕಿತು. ಅದನ್ನು ಬಿಡಿಸಿ ನೋಡಿದಾಗ, 380 ಗ್ರಾಂ ತೂಕದ ಆಭರಣಗಳು ಇದ್ದವು. ಕೂಡಲೇ ಅದನ್ನು ಗ್ರಾಪಂ ಸದಸ್ಯ ಶಿವಕುಮಾರ್ ಅವರಿಗೆ ತೋರಿಸಿದರು.

ಜಾಹೀರಾತು

ಅದರಂತೆ ಶಿವಕುಮಾರ್, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಅದನ್ನು ಒಪ್ಪಿಸಿದರು.

ಇದೇ ಸಂದರ್ಭ ನ.14ರಂದು ಪಾಣಮಂಗಳೂರಿನ ನರಸಿಂಹ ಪ್ರಭು ತಮ್ಮ ಚಿನ್ನಾಭರಣ ಕಳೆದುಕೊಂಡ ಬಗ್ಗೆ ಗ್ರಾಮಾಂತರ ಪೊಲೀಸರಿಗೆ ತಿಳಿಸಿ, ಆಭರಣದ ಮಾದರಿ ತಿಳಿಸಿದರು. ಹಮೀದ್, ಶಿವಕುಮಾರ್ ಅವರನ್ನು ಪೊಲೀಸರು ಕರೆಸಿ, ಅವರ ಡಿವೈಎಸ್ಪಿ ರವೀಶ್ ಸಮಕ್ಷಮ, ಇತರ ಅಧಿಕಾರಿಗಳ ಮೂಲಕ ಆಭರಣ ನೀಡಲಾಯಿತು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ