ಬಂಟ್ವಾಳ: ತಾಲೂಕು ಪಂಚಾಯಿತಿಯ ಜಮಾಬಂದಿ ಕಾರ್ಯಕ್ರಮ ನವೆಂಬರ್ 18ರಂದು ನಡೆಯಲಿದೆ.
ಬೆಳಗ್ಗೆ 10ಕ್ಕೆ ತಾಪಂನ ಎಸ್ಜಿಎಸ್ವೈ ಸಭಾಂಗಣದಲ್ಲಿ ಜಮಾಬಂದಿ ನಿರ್ವಹಣಾಧಿಕಾರಿಯಾಗಿ ದ.ಕ.ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ನಡೆಸಿಕೊಡಲಿದ್ದಾರೆ.
ಸಭೆಯಲ್ಲಿ ತಾಲೂಕು ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರು ಭಾಗವಹಿಸಿ ತಮ್ಮ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ.ಅಬ್ಬಾಸ್ ಆಲಿ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ ತಿಳಿಸಿದ್ದಾರೆ.