ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಆರಂಭಗೊಂಡಿದೆ.
ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸೂಚನೆಯಂತೆ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳ ತಂಡ ಕಾರ್ಯಾಚರಣೆ ಆರಂಭಿಸಿತ್ತು.
ಸೆಟ್ ಬ್ಯಾಕ್ ತೆರವು, ಬಸ್ ನಿಲುಗಡೆ ಹಾಗೂ ವಿವಿಧ ಸಮಸ್ಯೆಗಳ ಕುರಿತು ಪ್ರಸ್ತಾಪವಾಗಿದ್ದು, ಇದರನ್ವಯ ಬಸ್ ಬೇ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ ನೇತೃತ್ವದಲ್ಲಿ ಪೊಲೀಸರು ಸಹಕಾರ ನೀಡುತ್ತಿದ್ದು, ವಾರದೊಳಗೆ ಬಸ್ ನಿಲುಗಡೆಗೆ ವ್ಯವಸ್ಥೆಯಾಗುವ ನಿರೀಕ್ಷೆ ಇದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಪೊಳಲಿ ಕ್ರಾಸ್ ನಲ್ಲಿ ಬಸ್ ಬೇ ನಿರ್ಮಾಣ"