ಬಂಟ್ವಾಳ

ತೋಟಗಾರಿಕಾ ಇಲಾಖೆಗೆ ನಾಗರಾಜ ವಿಸಿಟ್!

ಬಂಟ್ವಾಳ: ಬಿ.ಸಿ.ರೋಡಿನಲ್ಲಿರುವ ತೋಟಗಾರಿಕಾ ಇಲಾಖಾ ಕಚೇರಿಯೊಳಗೆ ಮಂಗಳವಾರ ವಿಶೇಷ ಅತಿಥಿ ಆಗಮನ.

ನಾಗರಹಾವೊಂದು ಕಚೇರಿಯೊಳಗೆ ಸುತ್ತಾಡಿ, ಕಡತಗಳಲ್ಲಿ ಹೊರಳಾಡಿ, ಸಹಾಯಕ ನಿರ್ದೇಶಕ ದಿನೇಶ್ ಆಚಾರ್ಯ ಕುಳಿತುಕೊಳ್ಳುವ ಕುರ್ಚಿ ಅಡಿಯಲ್ಲೇ ಓಡಾಡಿದೆ.

ಜಾಹೀರಾತು

ನಾಗರಹಾವನ್ನು ಕಂಡು ಬೆಚ್ಚಿ ಬಿದ್ದ ಸಿಬ್ಬಂದಿಗಳು ಹೊರ ಓಡಿ ಬಂದು ಉರಗ ತಜ್ಞ ಸ್ನೇಕ್ ಕಿರಣ್ ಅವರಿಗೆ ದೂರವಾಣಿ ಮೂಲಕ ತಿಳಿಸಿದ್ದು ಸ್ಥಳಕ್ಕೆ ಬಂದ ಅವರು ಕ್ಷಣಾರ್ಧದಲ್ಲಿ ಹಾವನ್ನು ಸೆರೆ ಹಿಡಿದು ಚಾಕಲೇಟ್ ಡಬ್ಬದಲ್ಲಿ ಬಂದಿಯಾಗಿಸಿದರು. ಡಬ್ಬದೊಳಗಿಂದಲೆ ಹೆಡೆ ಎತ್ತಿ ಬುಸುಗುಟ್ಟಿತ್ತಿದ್ದರೂ ಹಾವು ಕಂಡು ಆತಂಕಗೊಂಡಿದ್ದ ತೋಟಗಾರಿಕಾ ಇಲಾಖೆಯ ಸಿಬ್ಬಂದಿ ನಿರಾಳರಾದರು. ಬಳಿಕ ಸ್ನೇಕ್ ಕಿರಣ್ ಅರಣ್ಯ ಇಲಾಖೆಯ ಅಧಿಕಾರಿಗಳ ನೆರವು ಪಡೆದು ಹಾವನ್ನು ವಗ್ಗದ ಕೊಡ್ಯಮಲೆ ಅರಣ್ಯಕ್ಕೆ ಬಿಟ್ಟರು.

ಕೆಲ ದಿನಗಳ ಹಿಂದೆಯಷ್ಟೇ ಇದೇ ಕಚೇರಿಯಲ್ಲಿ ನಾಗರ ಹಾವು ಕಾಣಿಸಿಕೊಂಡಿತ್ತು ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ