ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಜಂಕ್ಷನ್ ನಲ್ಲಿ ಬಸ್ ಬೇ ನಿರ್ಮಾಣ ಕಾರ್ಯ ಆರಂಭಗೊಂಡಿದೆ.
ಕಳೆದ ವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ಸೂಚನೆಯಂತೆ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳ ತಂಡ ಕಾರ್ಯಾಚರಣೆ ಆರಂಭಿಸಿತ್ತು.
ಸೆಟ್ ಬ್ಯಾಕ್ ತೆರವು, ಬಸ್ ನಿಲುಗಡೆ ಹಾಗೂ ವಿವಿಧ ಸಮಸ್ಯೆಗಳ ಕುರಿತು ಪ್ರಸ್ತಾಪವಾಗಿದ್ದು, ಇದರನ್ವಯ ಬಸ್ ಬೇ ನಿರ್ಮಾಣ ಕಾರ್ಯ ಆರಂಭಗೊಂಡಿದೆ. ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ ನೇತೃತ್ವದಲ್ಲಿ ಪೊಲೀಸರು ಸಹಕಾರ ನೀಡುತ್ತಿದ್ದು, ವಾರದೊಳಗೆ ಬಸ್ ನಿಲುಗಡೆಗೆ ವ್ಯವಸ್ಥೆಯಾಗುವ ನಿರೀಕ್ಷೆ ಇದೆ.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…