ವಿಟ್ಲ

ಆಲ್ ಕಾರ್ಗೋ ಲಾಜಿಸ್ಟಿಕ್ಸ್ ನಿಂದ ಸ್ಕಾಲರ್ ಶಿಪ್ ವಿತರಣೆ

ವಿಟ್ಲ: ಸಂಸ್ಕಾರಯುತ ಶಿಕ್ಷಣ ಪಡೆದಾಗ ವಿದ್ಯಾರ್ಥಿ ಸಮಾಜದಲ್ಲಿ ಮುಂದೆ ಬರಲು ಸಾಧ್ಯ ಎಂದು ಆಲ್‌ಕಾರ್ಗೋ ಸಂಸ್ಥೆಯ ಮಂಗಳೂರು ವಿಭಾಗದ ಪ್ರಬಂಧಕ ನಕ್ರೆ ಸುರೇಂದ್ರ ಶೆಟ್ಟಿ ಹೇಳಿದರು.

ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಮುಂಬೈ ಆಲ್ ಕಾರ್ಗೋ ಲಾಜಿಸ್ಟಿಕ್ಸ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಬಂಟ್ವಾಳ ತಾಲ್ಲೂಕಿಗೆ ಸಂಬಂಧಪಟ್ಟ ಬಡ, ಪ್ರತಿಭಾನ್ವಿತ ಹಾಗೂ ಶಿಕ್ಷಣದಲ್ಲಿ ಸಾಧನೆಗೈದ 166 ವಿದ್ಯಾರ್ಥಿಗಳಿಗೆ 501100 ರೂ. ಸ್ಕಾಲರ್‌ಶಿಫ್‌ಗಳನ್ನು ವಿತರಿಸಿ ಮಾತನಾಡಿದರು.

ಜಾಹೀರಾತು

ಜೆಸಿಐ ತರಬೇತುದಾರ ಕೃಷ್ಣ ಮೋಹನ್ ಪಿ.ಎಸ್ ಮಾತನಾಡಿ ವಿದ್ಯಾರ್ಥಿ ವೇತನ ಪಡೆದಾಗ ವಿದ್ಯಾರ್ಥಿಗಳ ಜವಾಬ್ದಾರಿ ಹೆಚ್ಚಾಗುತ್ತದೆ ಎಂದರು.

ವಿಠಲ ವಿದ್ಯಾ ಸಂಘದ ಅಧ್ಯಕ್ಷ ಮುಗುಳಿ ತಿರುಮಲೇಶ್ವರ ಭಟ್, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ವಿಟ್ಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಶಂಕರ್ ಪಾಟಾಲಿ ಉಪಸ್ಥಿತರಿದ್ದರು.

ವಿಠಲ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಆದರ್ಶ ಚೊಕ್ಕಾಡಿ ಸ್ವಾಗತಿಸಿದರು. ಶಂಕರ ನಾರಾಯಣ ಪ್ರಸಾದ್ ಪರಿಚಯ ಮಾಡಿದರು. ಸುಪ್ರಜಿತ್ ಐಟಿಐನ ಪ್ರಾಂಶುಪಾಲ ರಘುರಾಮ ಶಾಸ್ತ್ರಿ ವಂದಿಸಿದರು. ಶಿಕ್ಷಕ ಸಿ.ಎಚ್ ಸುಬ್ರಹ್ಮಣ್ಯ ಭಟ್ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ