ಬೆಳಗಾವಿಯಲ್ಲಿ ಗ್ರಾಮಸಹಾಯಕರ ಅನಿರ್ದಿಷ್ಟಾವಧಿ ಮುಷ್ಕರ

ಬಂಟ್ವಾಳ:  ಡಿ ‘ಗ್ರೂಪ್ ನೌಕರರ ನಾಲ್ಕು ದಶಕಗಳ ಬೇಡಿಕೆ ಕುರಿತು ಸರಕಾರದ ಗಮನವನ್ನು ಸೆಳೆಯಲು ಬೆಳಗಾವಿ ಸುವರ್ಣ ಸೌಧದ ಎದುರು ಕರ್ನಾಟಕ ರಾಜ್ಯ ಕಂದಾಯ ಇಲಾಖೆ ಗ್ರಾಮ ಸಹಾಯಕರ ಅನಿರ್ದಿಷ್ಟವಾದಿ ಮುಷ್ಕರ ಆರಂಭಗೊಂಡಿದೆ.

1

ತಾಲೂಕು ಜಿಲ್ಲೆ ಹಾಗೂ ರಾಜ್ಯದ ರಾಜಧಾನಿಯಲ್ಲಿ ಹಲವಾರು ಬಾರಿ ಮುಷ್ಕರ ಹಾಗೂ ಪಾದಯಾತ್ರೆ ನಡೆಸಲಾಗಿತ್ತು. ಆದರೂ ಸರಕಾರ ಗ್ರಾಮ ಸಹಾಯಕರನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿರುವ ಮುಷ್ಕರನಿರತರು, 2013 ರ ಬೆಳಗಾವಿಯ ಸುವರ್ಣ ಸೌಧದಲ್ಲಿ ಜರಗಿದ ಚಳಿಗಾಲದ ಅಧಿವೇಶನದಲ್ಲಿ ಗ್ರಾಮ ಸಹಾಯಕರ ಬೇಡಿಕೆಯನ್ನು ಘೋಷಣೆ ಮಾಡಲು ಸರಕಾರಕ್ಕೆ ಒತ್ತಾಯಿಸಿದ್ದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದರು.

2

38 ವರ್ಷಗಳಿಂದ ಬೇಡಿಕೆಯನ್ನು ಸಲ್ಲಿಸುತ್ತ ಬಂದ್ದಿದ್ದರೂ ಯಾವುದೇ ಸರಕಾರವೂ ಗ್ರಾಮ ಸಹಾಯಕರ ಬೇಡಿಕೆಯನ್ನು ಈಡೇರಿಸುವತ್ತ ಗಮನವನ್ನು ಹರಿಸಿಲ್ಲ. ಸಮಾನ ವೇತನ ನಿಗದಿ ಪಡಿಸಿಲ್ಲ ದಿನದ 24 ಗಂಟೆ ಸರಕಾರದ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಪ್ರಾಮಾಣಿಕತೆಯಿಂದ ಮಾಡುತ್ತ ಬಂದಿರುವ ಗ್ರಾಮ ಸಹಾಯಕರನ್ನು ಸರಕಾರವು  ಗುಲಾಮರಂತೆ ನಡೆಸಿಕೊಂಡು ಹೋಗುತ್ತಿದೆ. ಗ್ರಾಮ ಸಹಾಯಕರನ್ನು ಡಿ’ ಗ್ರೂಪ್ ನೌಕರರೆಂದು ಪರಿಗಣಿಸಬೇಕು, ಸರಕಾರದ ಇತರ ನೌಕರರಿಗೆ ಸಿಗುವಂತಹ ಸೌಲಭ್ಯ. ಪಿಂಚಣಿ. ರಜೆ ಇನ್ನಿತರ ಸೌಲಭ್ಯ ಒದಗಿಸಬೇಕು ಎಂದು ಮುಷ್ಕರನಿರತರು ಒತ್ತಾಯಿಸಿದ್ದಾರೆ.

3

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬೆಳಗಾವಿಯಲ್ಲಿ ಗ್ರಾಮಸಹಾಯಕರ ಅನಿರ್ದಿಷ್ಟಾವಧಿ ಮುಷ್ಕರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*