ವಾಮದಪದವು

ಸಿದ್ಧಕಟ್ಟೆ ಚೆನ್ನಪ್ಪ ಶೆಟ್ಟಿ, ವಿಶ್ವನಾಥ ಶೆಟ್ಟಿ ಸಂಸ್ಮರಣೆ, ಯಕ್ಷಾರ್ಪಣೆ

ಬಂಟ್ವಾಳ: ಸಿದ್ಧಕಟ್ಟೆಯಂತಹ ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದರೂ ನಿರಂತರ ಓದುವ ಹವ್ಯಾಸದ ಜೊತೆಗೆ ತೆಂಕು ಮತ್ತು ಬಡಗು ತಿಟ್ಟಿನ ಯಕ್ಷಗಾನ ಕ್ಷೇತ್ರದಲ್ಲಿ ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ದುಡಿದು ಇತರ ಕಲಾವಿದರಿಗೂ ಮಾರ್ಗದರ್ಶನ ನೀಡುವ ಮೂಲಕ ಮಾನವೀಯ ಮೌಲ್ಯ ಎತ್ತಿ ಹಿಡಿದ ದಿವಂಗತ ಚೆನ್ನಪ್ಪ ಶೆಟ್ಟಿ ಮತ್ತು ದಿವಂಗತ ವಿಶ್ವನಾಥ ಶೆಟ್ಟಿ ಅವರು ಹುಟ್ಟೂರಿಗೆ ಹೆಮ್ಮೆ ತಂದಿದ್ದಾರೆ ಎಂದು ರಾಜ್ಯ ಪ್ರಶಸ್ತಿ ಪುರಸ್ಕೃತ ಹಾಸ್ಯ ಕಲಾವಿದ ಸೀತಾರಾಮ ಕುಮಾರ್ ಕಟೀಲು ಹೇಳಿದ್ದಾರೆ.


ತಾಲ್ಲೂಕಿನ ಸಿದ್ಧಕಟ್ಟೆ ಶ್ರೀ ಮಹಿಷಮಧರ್ಿನಿ ಯಕ್ಷಾಂತರಂಗ ವತಿಯಿಂದ ಶನಿವಾರ ರಾತ್ರಿ ಏರ್ಪಡಿಸಿದ್ದ ದಿವಂಗತ ಚೆನ್ನಪ್ಪ ಶೆಟ್ಟಿ ಮತ್ತು ದಿವಂಗತ ವಿಶ್ವನಾಥ ಶೆಟ್ಟಿ ಸಂಸ್ಮರಣೆ ಮತ್ತು ಯಕ್ಷಾರ್ಪಣೆ ಕಾರ್ಯಕ್ರಮದಲ್ಲಿ ಅವರು ಸಂಸ್ಮರಣಾ ಭಾಷಣ ಮಾಡಿದರು.
ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ ಕಾರ್ಯಕ್ರಮ ಉದ್ಘಾಟಿಸಿ, ಯಕ್ಷಗಾನ ರಂಗಕ್ಕೆ ವಿಶೇಷ ಮೆರುಗು ತಂದಿದ್ದ ಸಿದ್ಧಕಟ್ಟೆದ್ವಯರು ಅಲ್ಪಾವಧಿಯಲ್ಲೇ ನಮ್ಮಿಂದ ದೂರವಾಗಿದ್ದಾರೆ ಎಂದರು.
ಪೂಂಜ ಕ್ಷೇತ್ರದ ಪ್ರಧಾನ ಅರ್ಚಕ ಅನಂತ ಆಚಾರ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಲಾವಿದರಾದ ಸಂಗಬೆಟ್ಟು ಪದ್ಮನಾಭ ಶೆಟ್ಟಿಗಾರ್, ಸಿದ್ಧಕಟ್ಟೆ ಸದಾಶಿವ ಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಲಾಬಿ ಶೆಟ್ಟಿ, ಉಪಾಧ್ಯಕ್ಷ ಸತೀಶ ಪೂಜಾರಿ, ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭಾಕರ ಪ್ರಭು, ಮಾಜಿ ಸದಸ್ಯ ಅರ್ಕಕೀತರ್ಿ ಇಂದ್ರ, ಎಪಿಎಂಸಿ ಸದಸ್ಯ ರತ್ನಕುಮಾರ್ ಚೌಟ ಮತ್ತಿತರರು ಶುಭ ಹಾರೈಸಿದರು.
ವಲಯ ಬಂಟರ ಸಂಘದ ಉಪಾಧ್ಯಕ್ಷ ಶ್ರೀಧರ ಶೆಟ್ಟಿ, ಬಿಲ್ಲವ ಸಂಘದ ಸಂಘದ ಅಧ್ಯಕ್ಷ ಗೋಪಾಲ ಬಂಗೇರ, ಕುಲಾಲ ಸಂಘದ ಅಧ್ಯಕ್ಷ ಭೋಜ ಮೂಲ್ಯ, ಸಂಗಬೆಟ್ಟು ಶ್ರೀ ವೀರಭದ್ರ ಮಹಮ್ಮಾಯಿ ಕ್ಷೇತ್ರದ ಗುರಿಕಾರ ಚಂದ್ರಹಾಸ ಶೆಟ್ಟಿಗಾರ್, ವಿಶ್ವಕರ್ಮ ಯುವಕ ಸಂಘದ ಮಾಜಿ ಅಧ್ಯಕ್ಷ ಅಚ್ಚುತ ಆಚಾರ್ಯ, ಕೋಯರ್ಾರು ಶ್ರೀ ದುಗರ್ಾ ಮಹಮ್ಮಾಯಿ ಕ್ಷೇತ್ರದ ಗುರಿಕಾರ ಗೋಪಾಲ ಗೌಡ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ  ಲೋಕಯ ಗಾಡಿಪಲ್ಕೆ, ಗ್ರಾಮ ಪಂಚಾಯಿತಿ ಸದಸ್ಯ ಯೋಗೀಶ ಆಚಾರ್ಯ ಎಲ್ಪೇಲು, ವಕೀಲ ಸುರೇಶ ಶೆಟ್ಟಿ, ಹೇಮಲತಾ ಚೆನ್ನಪ್ಪ ಶೆಟ್ಟಿ, ಜಯಂತಿ ವಿಶ್ವನಾಥ ಶೆಟ್ಟಿ ಮತ್ತಿತರರು ಇದ್ದರು.
ಸಮಿತಿ ಅಧ್ಯಕ್ಷ ಸಂದೇಶ ಶೆಟ್ಟಿ ಪೊಡುಂಬ ಸ್ವಾಗತಿಸಿ, ವಂದಿಸಿದರು. ಡಾ.ಯೋಗೀಶ ಕೈರೋಡಿ ಕಾರ್ಯಕ್ರಮ ನಿರೂಪಿಸಿದರು.
ಇದೇ ವೇಳೆ ಯಕ್ಷ ಹಾಸ್ಯ ವೈಭವ ಮತ್ತು ಶ್ರೀದೇವಿ ಮಹಾತ್ಮೆ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts