ವಾಮದಪದವು

ದೈವಸ್ಥಾನ ಪುನರ್‌ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ತಾಲೂಕಿನ ಎಲಿಯ ಮಾಗಣೆಗೊಳಪಟ್ಟ ಎಲಿಯನಡುಗೋಡು ಗ್ರಾಮದ ಕಾರಣಿಕ ಕ್ಷೇತ್ರವಾದ ಉಪ್ಪಿರ ಶ್ರೀ ಕೊಡಮಣಿತ್ತಾಯ ಮತ್ತು ಶ್ರೀ ಮುಜುಲ್ನಾಯ ದೈವಸ್ಥಾನದ ಜೀರ್ಣೋದ್ಧಾರ ಕಾರ್ಯ ಆರಂಭಗೊಂಡಿದ್ದು ನೂತನ ದೈವಸ್ಥಾನಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಗುರುವಾರ ಜರಗಿತು.

ಶ್ರೀ ಕ್ಷೇತ್ರ ಪಡ್ಯಾರಬೆಟ್ಟುವಿನ ಆಡಳಿತ ಮೊಕ್ತೇಸರ ಜೀವಂದರ್ ಕುಮಾರ್ ಅವರು ಶಿಲಾನ್ಯಾಸ ನೆರವೇರಿಸಿ ಬಳಿಕ ನಡೆದ ಧಾರ್ಮಿಕಭೆಯಲ್ಲಿ ಮಾತನಾಡಿ ಶುಭಹಾರೈಸಿದರು.ಶ್ರೀ ಕ್ಷೇತ್ರ ಪೂಂಜದ ಪ್ರ.ಅರ್ಚಕ ಅನಂತ ಆಚಾರ್ಯ ಅವರು ಆಶೀರ್ವಚನ ನೀಡಿದರು

ಜಾಹೀರಾತು

ಕ್ಷೇತ್ರ ಆಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಅವರು ಮಾತನಾಡಿ ಪಂಚ ಗ್ರಾಮಗಳ ಮಾಗಣೆಗೊಳಪಟ್ಟ ಈ ಕ್ಷೇತ್ರ 150 ವರ್ಷಗಳ ಹಿಂದೆ ಹಿರಿಯರು ಆರಾಧಿಸಿಕೊಂಡು ಬಂದಿದ್ದು, ಪರ್ವ, ನರ್ತನ ಸೇವೆಗಳಿಂದ ಕಾರಣಿಕ ಕ್ಷೇತ್ರವೆಂದು ಮೆರೆಯುತ್ತಿತ್ತು.ಕಾಲಕ್ರಮೇಣ ನಿಂತು ಹೋಗಿತ್ತು.ಪೂಂಜ ದೇವಸ್ಥಾನದ ಬ್ರಹ್ಮಕಲಶ ಸಂದರ್ಭದಲ್ಲಿ ಸ್ಥಳ ಪ್ರಶ್ನೆಯಲ್ಲಿ ಕಂಡು ಬಂದ ಪ್ರಕಾರ ಜೀರ್ಣೋದ್ಧಾರದ ಸಂಕಲ್ಪ ಮಾಡಲಾಗಿದೆ.ಸುಮಾರು ಎಂಬತ್ತು ಲಕ್ಷ ರೂ.ವೆಚ್ಚವಿದೆ.ಇದಕ್ಕೆ ಗ್ರಾಮಸ್ಥರು ಸಹಕರಿಸಬೇಕಾಗಿದೆ ಎಂದರು.

ಆಡಳಿತ ಸಮಿತಿ ಅಧ್ಯಕ್ಷ ಮೂಡಬಿದಿರೆ ಚೌಟರ ಅರಮನೆ ಕುಲದೀಪ್ ಚೌಟ,ಗೌರವ ಸಲಹೆಗಾರ ಶ್ರೀನಿವಾಸ ಪೆರಾಡ್ಕರ್,ಟ್ರಸ್ಟ್ ಅಧ್ಯಕ್ಷ ಪ್ರಕಾಶ್‌ಜೈನ್ ಜಂಕಳ,ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಸಂತ ಶೆಟ್ಟಿ ಆಟ್ಲೊಟ್ಟುಗುತ್ತು (ಕೇದಗೆ),ಮಂಗಳೂರು ಉದ್ಯಮಿ ಸುರೇಶ್ ಶೆಟ್ಟಿ,ಜಿ.ಪಂ.ಸದಸ್ಯ ಧರಣೇಂದ್ರ ಕುಮಾರ್,ರಾಯಿ ಕೊಯಿಲ ಹಿಂದೂ ಧರ್ಮೋತ್ಥಾನ ಟ್ರಸ್ಟ್ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಮಾವಂತೂರು,ರವೀಂದ್ರ ಅರಮನೆ ಅವರು ಉಪಸ್ಥಿತರಿದ್ದರು.

ಪ್ರಮುಖರಾದ ರತ್ನಕುಮಾರ ಚೌಟ, ಸಂದೇಶ್ ಶೆಟ್ಟಿ ಪೊಡುಂಬ, ಭೋಜ ಶೆಟ್ಟಿ ನವರಂಗ್, ಹರೀಶ್ ಹಿಂಗಾಣಿ, ಜಗತ್ಪಾಲ ಶೆಟ್ಟಿ, ಬೇಬಿ ಶೆಟ್ಟಿ, ರಾಘವೇಂದ್ರ ಭಟ್, ಮಹಾಬಲ ಶೆಟ್ಟಿ,ಮಹಾವೀರ ಜೈನ್, ಕೃಷ್ಣಯ್ಯ ಆಚಾರ್ಯ ಉಮೇಶ್ ಶೆಟ್ಟಿ ಕೊನೆರೊಟ್ಟು, ಹರಿಪ್ರಸಾದ ಶೆಟ್ಟಿ, ಧರ್ನಪ್ಪ ಶೆಟ್ಟಿ, ರವಿ ಮೇಸ್ತ್ರಿ, ಸದಾಶಿವ ಕುಲಾಲ್, ಜನಾರ್ದನ ಬಂಗೇರ, ಸೀತಾರಾಮ ಶೆಟ್ಟಿ, ಗುತ್ತಿನ ಮನೆಯವರು, ವಿವಿಧ ಸಮಿತಿಪದಾಧಿಕಾರಿಗಳು ಹಾಗೂ ಸದಸ್ಯರು ಮತ್ತು ಎಲಿಯಮಾಗಣೆ ಗ್ರಾಮಸ್ಥರು ಉಪಸ್ಥಿತರಿದ್ದರು.

ಕಾನೂನು ಸಲಹೆಗಾರ,ನ್ಯಾಯವಾದಿ ಸುರೇಶ್ ಶೆಟ್ಟಿ ಸಿದ್ದಕಟ್ಟೆ ಅವರು ಸ್ವಾಗತಿಸಿದರು. ಉಮೇಶ್ ಹಿಂಗಾಣಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts