ಜಿಲ್ಲಾ ಸುದ್ದಿ

ಶೂಟೌಟ್ ಪ್ರಕರಣ, ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಪುತ್ತೂರು: ರಾಜಧಾನಿ ಜ್ಯುವೆಲರ್ಸ್ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ರಮೀಜ್ ರಾಜಾ ಎಂಬಾತ ನ.23ರಂದು ಅಬುದಾಭಿಯಿಂದ ಚೆನ್ನೈ ಮೂಲಕ ಕೇರಳದಲ್ಲಿರುವ ತನ್ನ ಮನೆಗೆ ಬರುವವ ಸಂದರ್ಭ ಕಲ್ಲಿಕೋಟೆ ವಿಮಾನ ನಿಲ್ದಾಣದಲ್ಲಿ ಆತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.

ಜಾಹೀರಾತು

ಪುತ್ತೂರು ನಗರ ಠಾಣಾ ವ್ಯಾಪ್ತಿಯೊಳಗಿರುವ ರಾಜಧಾನಿ ಜ್ಯುವೆಲರ್ಸ್ ಗೆ ಬೈಕಿನಲ್ಲಿ 2015ರ ಅಕ್ಟೋಬರ್ 6ರಂದು ಬಂದು ಪಿಸ್ತೂಲಿನಿಂದ ಮೂರು ಸುತ್ತು ಗುಂಡು ಹಾರಿಸಿದ ಪ್ರಕರಣ ಸುದ್ದಿಯಾಗಿತ್ತು.

ಈಗಾಗಲೇ ಕಾಲಿಯಾ ರಫೀಕ್, ಅಬ್ದುಲ್ ಆಸೀರ್, ಮಹಮ್ಮದ್ ಹನೀಫ್, ಮುನ್ನಾ ಮತ್ತು ಅನ್ವರ್ ಸುಂಕದಕಟ್ಟೆ ಅವರನ್ನು ಬಂಧಿಸಲಾಗಿತ್ತು. ಪುತ್ತೂರು ನಗರ ಪೊಲೀಸ್ ಠಾಣಾ ಅಪರಾದ ವಿಭಾಗದ ಪಿ.ಎಸ್.ಐ.  ವೆಂಕಟೇಶ್ ಕೆ. ಹಾಗೂ ಸಿಬ್ಬಂದಿಗಳಾದ ಸ್ಕರಿಯ, ಹೆಚ್.ಸಿ. ನಾರಾಯಣ,  ಪ್ರಶಾಂತ್ ರೈ ಆರೋಪಿಯನ್ನು ದಸ್ತಗಿರಿ ಮಾಡಿದ್ದಾರೆ. ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ