ಬಂಟ್ವಾಳ: ಬಿ.ಸಿ.ರೋಡಿನ ಕೈಕಂಬ ಹಾಗೂ ಬಿ.ಸಿ.ರೋಡಿನಲ್ಲಿ ಇನ್ನು ಹದಿನೈದು ದಿನದೊಳಗೆ ಬಸ್ ಬೇ ನಿರ್ಮಾಣ ಆಗಲೇಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ.ಜಗದೀಶ್ ಖಡಕ್ ಸೂಚನೆ ನೀಡಿದ್ದಾರೆ.
ಬಂಟ್ವಾಳ ಪುರಸಭೆಯಲ್ಲಿ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಇದಕ್ಕೆ ಸಂಬಂಧಪಟ್ಟಂತೆ ಯಾವುದೇ ಅಡೆತಡೆ ಇದ್ದರೂ ನಿವಾರಿಸಬೇಕು ಎಂದು ಸೂಚಿಸಿದರು.
ಅಧಿಕಾರಿಗಳಿಗೆ ಪ್ರತಿಯೊಂದು ವಿಷಯದಲ್ಲೂ ಕ್ಲಾಸ್ ತೆಗೆದುಕೊಂಡ ಅವರು, ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಆದೇಶ ನೀಡಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)