ಬಂಟ್ವಾಳ

ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ನಿಂದ ಕೇರಳ ಸರಕಾರಿ ಶಾಲೆ ಅಧ್ಯಯನ

ಬಂಟ್ವಾಳ: ಸರಕಾರಿ ಶಾಲೆಗಳನ್ನು ಉಳಿಸಿ, ದೇಶಾದ್ಯಂತ ಏಕರೂಪದ ಶಿಕ್ಷಣವನ್ನು ಜಾರಿಗೊಳಿಸುವಂತೆ ಆಗ್ರಹಿಸಿ ಕಳೆದ ಒಂದೂವರೆ ವರ್ಷದಿಂದ ಶೈಕ್ಷಣಿಕ ಆಂದೋಲನ ನಡೆಸುತ್ತಿರುವ ಕರೆಂಕಿ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಇದೀಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಕೇರಳ ರಾಜ್ಯದಲ್ಲಿನ ಸರಕಾರಿ ಶಾಲೆಗಳಲ್ಲಿ ಶಿಕ್ಷಣ ವ್ಯವಸ್ಥೆಯ ಅಧ್ಯಯನ ನಡೆಸಿದೆ.

ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ನೇತೃತ್ವದಲ್ಲಿ ಕ್ಲಬ್‌ನ ಪದಾಧಿಕಾರಿಗಳ ತಂಡ ಎರಡು ದಿನಗಳ ಕಾಲ ಕೇರಳ ರಾಜ್ಯದ ಕೆಲವು ಸರಕಾರಿ ಶಾಲೆಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದೆ. ಸರಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಅಲ್ಲಿನ ಸರಕಾರ, ಪೋಷಕರು ಹಾಗೂ ಶಿಕ್ಷಕರ ಸಂಘ ಹಾಗೂ ಸಮುದಾಯದ ಕೊಡುಗೆಯ ಬಗ್ಗೆ ತಂಡ ಅಧ್ಯಯನ ನಡೆಸಿದೆ. ಕೊಲ್ಲಂ ಜಿಲ್ಲೆಯ ಪಾರುಪಳ್ಳಿ ಕಿರಿಯ ಪ್ರಾಥಮಿಕ ಶಾಲೆ, ಕಲ್ಲುವತ್‌ಕಲ್ ಕಿರಿಯ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆ, ಮೈಲಕಾಡು ಹಿರಿಯ ಪ್ರಾಥಮಿಕ ಶಾಲೆ, ಚರಿಕೆರಾ ಶಾಲೆ, ಪೂಥಕುಲಂ ಕಿರಿಯ ಪ್ರಾಥಮಿಕ ಶಾಲೆಗಳನ್ನು ತಂಡ ಸಂದರ್ಶಿಸಿದೆ.

ಜಾಹೀರಾತು

ಸಮುದಾಯ ಸಹಭಾಗಿತ್ವ ಸಕ್ರಿಯ

ಕೇರಳದ ಶಾಲೆಗಳ ಅಭಿವೃದ್ದಿಯಲ್ಲಿ ಸಮುದಾಯದ ಪಾತ್ರ ಮಹತ್ತರವಾಗಿದೆ. ಸಮುದಾಯದ ಕೊಡುಗೆಯಿಂದಾಗಿ ಅನೇಕ ಅಭಿವೃದ್ದಿ ಕಾರ್ಯಗಳನ್ನು ಶಾಲೆಗಳಲ್ಲಿ ಕೈಗೊಳ್ಳಲಾಗಿದೆ. ದಿನದ 24 ಗಂಟೆಗಳ ಕಾಲ ಸೆಕ್ಯೂಟರಿಟಿ ಗಾರ್ಡ್‌ಗಳನ್ನು ನಿಯೋಜಿಸಲಾಗಿದ್ದು ಪಿಟಿಎ ಇದರ ಜವಬ್ದಾರಿ ನಿಯೋಜಿಸುತ್ತದೆ.  ಶಾಲೆಗಳ ಅಭಿವೃದ್ದಿಯ ಜವಬ್ದಾರಿಯನ್ನು ಪಂಚಾಯಿತಿಗಳಿಗೆ ವಹಿಸಿ ಕೊಡಲಾಗಿದೆ. ಪಂಚಾಯಿತಿನ ಒಟ್ಟು ಅನುದಾನದ ಶೇ. ೨೦ನ್ನು ಶಾಲೆಗಳ ಅಭಿವೃದ್ದಿಗೆ ವಿನಿಯೋಗಿಸಲಾಗುತ್ತಿದೆ.

ಶಾಸಕರ ದತ್ತು ಶಾಲೆಗಳು

ಜಾಹೀರಾತು

ಇಲ್ಲಿನ ಪ್ರತಿಯೊಬ್ಬ ಶಾಸಕ ಕನಿಷ್ಟ ೫ ಸರಕಾರಿ ಶಾಲೆಗಳನ್ನು ದತ್ತು ಪಡೆದು ಸಮಗ್ರ ಅಭಿವೃದ್ದಿ ಪಡಿಸಬೇಕು. ಈ ನಿಟ್ಟಿನಲ್ಲಿ ಇಲ್ಲಿನ ಚಾತನೂರು ವಿಧಾನಸಭಾ ಕ್ಷೇತ್ರದ ಶಾಸಕ ಜಯಲಾಲ್ ಅವರು ದತ್ತುಪಡೆದುಕೊಂಡ ೫ ಸರಕಾರಿ ಶಾಲೆಗಳು ಮಾದರಿ ಶಾಲೆಗಳಾಗಿ ಗುರುತಿಸಿಕೊಂಡಿವೆ. ಶಾಲೆಯ ಎಲ್ಲಾ ಕೊಠಡಿಗಳಿಗೆ ಟೈಲ್ಸ್ ಅಳವಡಿಕೆ, ಎಲ್‌ಇಡಿ ಪ್ರೋಜೆಕ್ಟರ್,  ಪ್ರೊಜೆಕ್ಟರ್ ಕೊಠಡಿಗಳಿಗೆ ಹವಾನಿಯಂತ್ರಕ, ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ಶಾಲಾ ಆವರಣವನ್ನು ಸಂಪೂರ್ಣವಾಗಿ ಪ್ಲಾಸ್ಟಿಕ್ ಮುಕ್ತಗೊಳಿಸಲಾಗಿದೆ.

ಸರಕಾರಿ ಶಾಲೆಯಲ್ಲಿಯೇ ಆಂಗ್ಲಮಾಧ್ಯಮ

ಖಾಸಗಿ ಶಾಲೆಗಳ ಪೈಪೋಟಿ ತಡೆಯಲು ಹಾಗೂ  ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು 15 ವರ್ಷಗಳ ಹಿಂದೆಯೇ ಸರಕಾರಿ ಶಾಲೆಗಳಲ್ಲಿ ಪ್ರತ್ಯೇಕ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲಾಗಿದೆ.  ಇದರಿಂದಾಗಿ ಇತರ ಖಾಸಗಿ ಶಾಲೆಗಳಷ್ಟೇ ಪ್ರಾಮುಖ್ಯತೆ ಸರಕಾರಿ ಶಾಲೆಗಳಿಗೂ ಇದೆ. ಪ್ರತೀ ಸರಕಾರಿ ಶಾಲೆಯಲ್ಲೂ 300 ಕ್ಕೆ ಕಡಿಮೆ ಇಲ್ಲದಂತೆ ವಿದ್ಯಾರ್ಥಿಗಳಿದ್ದಾರೆ. ಬಹುತೇಕ ಶಿಕ್ಷಕರು, ಸರಕಾರಿ ನೌಕರರು, ಖಾಸಗಿ ಶಾಲೆಯ ಶಿಕ್ಷಕರೂ ಕೂಡ ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸುತ್ತಿದ್ದಾರೆ. ಶಾಸಕರ ಮಗನೂ ಸರಕಾರಿ ಶಾಲೆಯಲ್ಲಿ ವಿದ್ಯಭ್ಯಾಸ ನಡೆಸುವುದು ಇಲ್ಲಿನ ವಿಶೇಷ.  ಕೇರಳ ಸರಕಾರಿ ಶಾಲೆಗಳಿಗೆ ಭೇಟಿ ನೀಡಿದ ತಂಡದಲ್ಲಿ ದುರ್ಗಾಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಕಾರ್ಯದರ್ಶಿ ನವೀನ್, ಸದಸ್ಯರಾದ ವಿಠಲ್, ಮನೋಹರ್, ರಂಜಿತ್ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ