ವಿಟ್ಲ

ಟಿಪ್ಪರ್ – ಓಮ್ನಿ ಡಿಕ್ಕಿ: ಇಬ್ಬರು ಗಂಭೀರ

ವಿಟ್ಲ: ಟಿಪ್ಪರ್ ಹಾಗೂ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಗಂಬೀರ ಗಾಯಗೊಂಡ ಘಟನೆ ಬೈರಿಕಟ್ಟೆ ಸಮೀಪ ಶನಿವಾರ ನಡೆದಿದೆ.

ಬಾಯರು ಪೊನ್ನಂಗಳ ನಿವಾಸಿ ಮಹಾಬಲೇಶ್ವರ ಭಟ್ (70), ಪತ್ನಿ ಶಂಕರಿ (60)ಅವರು ಗಾಯಾಳುಗಳು. ವಿಟ್ಲದಿಂದ ಕನ್ಯಾನ ಕಡೆಗೆ ಹೋಗುತ್ತಿದ್ದ ಓಮ್ನಿಗೆ ಬೈರಿಕಟ್ಟೆ ಸಮೀಪದ ಕಡಿದಾದ ತಿರುವಿನಲ್ಲಿ ಟಿಪ್ಪರ್ ಡಿಕ್ಕಿಯಾಗಿದೆ. ಇದರಿಂದ ಓಮ್ನಿಯ ಮುಂಭಾಗ ಜಖಂಗೊಂಡಿದ್ದು, ಅದರಲ್ಲಿದ್ದ ಇಬ್ಬರಿಗೆ ಗಂಬೀರ ಗಾಯವಾಗಿದೆ.

ಜಾಹೀರಾತು

ಚಾಲನೆ ಮಾಡುತ್ತಿದ್ದ ಮಹಾಬಲೇಶ್ವರ ಭಟ್ ಅವರು ಕಾಲಿಗೆ ಹಾಗೂ ಶಂಕರಿ ಅವರ ತಲೆಗೆ ಗಂಬೀರವಾದ ಗಾಯವಾಗಿದೆ. ಇಬ್ಬರನ್ನು ವಿಟ್ಲ 108 ವಾಹನದ ಇಎಂಟಿ ನಾಗೇಶ್ ಹಾಗೂ ಪೈಲೆಟ್ ವೀರಭದ್ರ ಮಂಗಳೂರು ಖಾಸಗೀ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ ಮತ್ತು ಸಿಬ್ಬಂದಿ ಬೇಟಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ