ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ

 ಬಂಟ್ವಾಳ: ಹಸು ದೇಶದ ಕೃಷಿ ಸಂಸ್ಕೃತಿಯನ್ನು ಉಳಿಸುತ್ತದೆ ಮತ್ತು ಜನರ ಆರೋಗ್ಯ ವೃದ್ದಿಸುತ್ತದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಹೇಳಿದರು.

11

ಕಲ್ಲಡ್ಕ ಹಾಲುಉತ್ಪಾದಕರ ಸಹಕಾರ ಸಂಘ ನಿ. ನೂತನ ಸಾಂದ್ರ ಶೀತಲೀಕರಣ ಘಟಕ (ಬಿ.ಎಂ.ಸಿ.) ಕ್ಷೀರವಾರಿಧಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ಜನರ ಬದುಕಿಗೆ ಬೇಕಾದ ಕಾರ್‍ಯವನ್ನು ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ಮಾಡಿದೆ. ಗೋವಿನ ಬಗ್ಗೆ ಎಲ್ಲಾ ಜನರಿಗೆ ಪ್ರೀತಿ ಬರಬೇಕು. ಗೋವಿನ ರಕ್ಷಣೆ ಆದರೆ ಮಾತ್ರ ಹಾಲು ಉತ್ಪಾದಕರ ಸಹಕಾರ ಸಂಘ ಬೆಳೆಯುತ್ತದೆ ಎಂದರು.

ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಅಧ್ಯಕ್ಷ ಕೆ. ರವಿರಾಜ ಹೆಗ್ಡೆ ಮಾತನಾಡಿ ಹಾಲು ಉತ್ಪಾದನೆಯ ಮೂಲಕ ಈ ಮಣ್ಣಿನ ಶ್ರೇಷ್ಟತೆಯನ್ನು ಉಳಿಸುವ ಕೆಲಸ ಹೆಚ್ಚಾಗುತ್ತಿದೆ. ಗುಣಮಟ್ಟದ ಹಾಲಿನ ಉತ್ಪಾದನೆಯ ಮೂಲಕ ಹಳ್ಳಿಗಳು ಆರ್ಥಿಕವಾಗಿ ಎತ್ತರಕ್ಕೆ ಬೆಳೆಯಲು ಮಹತ್ತರ ಪಾತ್ರವಹಿಸುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ  ಕಲ್ಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಶೀತಲೀಕರಣ ವ್ಯವಸ್ಥೆ ಸುಸಜ್ಜಿತವಾಗಿ ಮಾಡಲಾಗಿದೆ ಎಂದು ಹೇಳಿದರು.  ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ನಿರ್ದೇಶಕರುಗಳಾದ  ಕೆ.ಪಿ. ಸುಚರಿತ ಶೆಟ್ಟಿ, ವೀಣಾ ಆರ್.ರೈ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕ ಡಾ. ಬಿ.ವಿ. ಸತ್ಯನಾರಾಯಣ, ಗೋಳ್ತಮಜಲು ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ನಿ. ಉಪಾಧ್ಯಕ್ಷ ರತ್ನಾಕರ ಪ್ರಭು, ಕಾರ್‍ಯದರ್ಶಿ ರಾಜೇಶ್, ವ್ಯವಸ್ಥಾಪಕ ಡಾ. ವಿತ್ಯಾನಂದ ಭಕ್ತ, ಉಪವ್ಯವಸ್ಥಾಪಕ ಡಾ. ಮಧುಸೂಧನ ಕಾಮತ್, ನಿರ್ದೇಶಕರುಗಳಾದ ರತ್ನಾಕರ ಭಂಡಾರಿ ಸಂಕಪ್ಪ ಕೊಟ್ಟಾರಿ, ಲಿಯೋ ಡಿ’ಕುನಾ, ಹರೀಶ ನಾಯ್ಕ್, ಧನವತಿ, ಮಿಥುನ್  ಉಪಸ್ಥಿತರಿದ್ದರು.

ಜಾಹೀರಾತು

ಕಲ್ಲಡ್ಕ  ಹಾಲು ಉತ್ಪಾದಕರ ಸಹಕಾರ ಸಂಘ ನಿ. ಇದರ  ಅಧ್ಯಕ್ಷ ಪದ್ಮನಾಭ ಕೊಟ್ಟಾರಿ ಸ್ವಾಗತಿಸಿ ಪ್ರಸ್ತಾವನೆ ನೀಡಿದರು.  ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವಿಸ್ತರಣಾಧಿಕಾರಿ ಜಗದೀಶ ಎ ವಂದಿಸಿದರು.  ಕಾರ್‍ಯದರ್ಶಿ ರಾಜೇಶ್ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಹಸುವಿನಿಂದ ದೇಶದ ಕೃಷಿ ಸಂಸ್ಕೃತಿ ವೃದ್ಧಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*