ಬಂಟ್ವಾಳ: ಉಳಿ ಗ್ರಾಮದ ಉಳಿಬೈಲಿನಲ್ಲಿ ಪಾದಾಚಾರಿ ಗೃಹಿಣಿಯೋರ್ವರ ಸುಮಾರು 80 ಸಾವಿರ ರೂ ಮೌಲ್ಯದ ಚಿನ್ನದ ಕರಿಮಣಿ ಸರವನ್ನು ಅಪರಿಚಿತನೋರ್ವ ಕಿತ್ತೊಯ್ದ ಘಟನೆ ಶುಕ್ರವಾರ ನಡೆದಿದೆ.
ಇಲ್ಲಿನ ಉಗ್ಗಪ್ಪ ಪೂಜಾರಿ ಅವರ ಪತ್ನಿ ಶಾರದ ಅವರು ಕರಿಮಣಿ ಸರ ಕಳಕೊಂಡವರು. ಅವರು ತಮ್ಮ ಮಗುವನ್ನು ಶಾಲೆಗೆ ಬಿಟ್ಟು ವಾಪಾಸು ರಸ್ತೆಯಲ್ಲಿ ನಡೆದುಕೊಂಡು ಬರುತ್ತಿರುವಾಗ ಬೈಕಿನಲ್ಲಿ ಬಂದ ಅಪರಿಚಿತ ದಾರಿ ಕೇಳುವ ನೆಪದಲ್ಲಿ ಶಾರದ ಅವರ ಕತ್ತಿನಲ್ಲಿದ್ದ ಕರಿಮಣಿ ಸರವನ್ನು ಕಿತ್ತು ಪರಾರಿಯಾಗಿದ್ದಾನೆ. ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬೈಕಿನಲ್ಲಿ ಬಂದು ಚಿನ್ನಾಭರಣ ಸೆಳೆದ ಅಪರಿಚಿತ"
Be the first to comment on "ಬೈಕಿನಲ್ಲಿ ಬಂದು ಚಿನ್ನಾಭರಣ ಸೆಳೆದ ಅಪರಿಚಿತ"