ಪುರಸಭೆ ಬಜೆಟ್ ಪೂರ್ವಭಾವಿ ಸಭೆ

purasabhe-meeting

ಬಂಟ್ವಾಳ: ಪುರಸಭೆಯ ಬಜೆಟ್ ಗೆ ಪೂರ್ವಭಾವಿಯಾಗಿ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಸಭೆ ಸೋಮವಾರ ಬಂಟ್ವಾಳ ಪುರಸಭೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್, ಬಂಟ್ವಾಳ ಅಭಿವೃದ್ಧಿಗೆ ಪೂರಕ ಸಲಹೆಗಳನ್ನ ನೀಡಿದರೆ ಮುಂದಿನ ಪುರಸಭೆ ಬಜೆಟ್ ನಲ್ಲಿ ಅಳವಡಿಸಿ, ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದರು.

ಪುರಸಭಾ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ನೀರಿನ ಶುಲ್ಕ, ವೆಂಡಿಂಗ್ ಝೋನ್, ಬಸ್ ನಿಲ್ದಾಣಕ್ಕೆ ಹೊಸ ರೂಪ, ತ್ಯಾಜ್ಯ ವಿಲೇವಾರಿಯ ಕಾರ್ಯಕ್ರಮಕ್ಕೆ ಅನುದಾನ ಮೀಸಲಿಡುವ ಕುರಿತು ಪ್ರಸ್ತಾಪಿಸಲಾಯಿತು.

ವಿವಿಧ ವಿಷಯಗಳ ಕುರಿತು ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ, ನಾಗರಿಕ ಸ್ವಯಂಸೇವಾ ಪ್ರತಿನಿಧಿಗಳಾದ ಶಿವಶಂಕರ್, ಕೆ.ಸುಂದರ ರಾವ್, ಡಾ.ರಮಾದೇವಿ, ಮಹಾಬಲೇಶ್ವರ ಹೆಬ್ಬಾರ್, ಎಸ್.ಆರ್.ಪಟವರ್ಧನ್, ವಸಂತ ಬಾಳಿಗಾ, ದಾಮೋದರ್, ಸುಭಾಶ್ಚಂದ್ರ ಜೈನ್, ಗಿರೀಶ್ ಪೈ ಬಂಟ್ವಾಳ ಮತ್ತಿತರರು ವಿಷಯ ಮಂಡಿಸಿದರು.

ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಪೂರಕ ಮಾಹಿತಿ ನೀಡಿದರು. ಮುಖ್ಯಾಧಿಕಾರಿ ಸುಧಾಕರ್ ಮಾತನಾಡಿ, ಪುರಸಭೆ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಜೆಟ್ ಗೆ ಪೂರಕ ವಿಚಾರಗಳನ್ನು ಒದಸಿಗಲು ಕೋರಿದರು.

ಹಿಂದಿನ ಆಯವ್ಯಯ ಪೂರ್ವ ಸಮಾಲೋಚನಾ ಸಭೆಯಲ್ಲಿ ಪತ್ರಕರ್ತರು ನೀಡಿದ್ದ ಸಲಹೆಗಳು ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಭೆಯಲ್ಲಿದ್ದ ಪತ್ರಕರ್ತರು ಗಮನ ಸೆಳೆದರು.  ಸಮುದಾಯ ಅಧಿಕಾರಿ ಮತ್ತಡಿ ಹಾಗೂ ಪುರಸಭೆಯ ಇಲಾಖಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪುರಸಭೆ ಬಜೆಟ್ ಪೂರ್ವಭಾವಿ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*