ಬಂಟ್ವಾಳ

ಪುರಸಭೆ ಬಜೆಟ್ ಪೂರ್ವಭಾವಿ ಸಭೆ

ಬಂಟ್ವಾಳ: ಪುರಸಭೆಯ ಬಜೆಟ್ ಗೆ ಪೂರ್ವಭಾವಿಯಾಗಿ ಸಂಘ, ಸಂಸ್ಥೆಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರ ಅಭಿಪ್ರಾಯ ಸಂಗ್ರಹದ ಸಭೆ ಸೋಮವಾರ ಬಂಟ್ವಾಳ ಪುರಸಭೆಯಲ್ಲಿ ನಡೆಯಿತು.

ಈ ಸಂದರ್ಭ ಮಾತನಾಡಿದ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್, ಬಂಟ್ವಾಳ ಅಭಿವೃದ್ಧಿಗೆ ಪೂರಕ ಸಲಹೆಗಳನ್ನ ನೀಡಿದರೆ ಮುಂದಿನ ಪುರಸಭೆ ಬಜೆಟ್ ನಲ್ಲಿ ಅಳವಡಿಸಿ, ಜಾರಿಗೆ ತರಲು ಪ್ರಯತ್ನಿಸಲಾಗುವುದು ಎಂದರು.

ಜಾಹೀರಾತು

ಪುರಸಭಾ ವ್ಯಾಪ್ತಿಯಲ್ಲಿ ಸಿಸಿ ಕ್ಯಾಮರಾ ಅಳವಡಿಕೆ, ನೀರಿನ ಶುಲ್ಕ, ವೆಂಡಿಂಗ್ ಝೋನ್, ಬಸ್ ನಿಲ್ದಾಣಕ್ಕೆ ಹೊಸ ರೂಪ, ತ್ಯಾಜ್ಯ ವಿಲೇವಾರಿಯ ಕಾರ್ಯಕ್ರಮಕ್ಕೆ ಅನುದಾನ ಮೀಸಲಿಡುವ ಕುರಿತು ಪ್ರಸ್ತಾಪಿಸಲಾಯಿತು.

ವಿವಿಧ ವಿಷಯಗಳ ಕುರಿತು ಟ್ರಾಫಿಕ್ ಎಸ್ ಐ ಚಂದ್ರಶೇಖರಯ್ಯ, ನಾಗರಿಕ ಸ್ವಯಂಸೇವಾ ಪ್ರತಿನಿಧಿಗಳಾದ ಶಿವಶಂಕರ್, ಕೆ.ಸುಂದರ ರಾವ್, ಡಾ.ರಮಾದೇವಿ, ಮಹಾಬಲೇಶ್ವರ ಹೆಬ್ಬಾರ್, ಎಸ್.ಆರ್.ಪಟವರ್ಧನ್, ವಸಂತ ಬಾಳಿಗಾ, ದಾಮೋದರ್, ಸುಭಾಶ್ಚಂದ್ರ ಜೈನ್, ಗಿರೀಶ್ ಪೈ ಬಂಟ್ವಾಳ ಮತ್ತಿತರರು ವಿಷಯ ಮಂಡಿಸಿದರು.

ಪುರಸಭಾ ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು ಪೂರಕ ಮಾಹಿತಿ ನೀಡಿದರು. ಮುಖ್ಯಾಧಿಕಾರಿ ಸುಧಾಕರ್ ಮಾತನಾಡಿ, ಪುರಸಭೆ ಅಭಿವೃದ್ಧಿ ಹಿನ್ನೆಲೆಯಲ್ಲಿ ಬಜೆಟ್ ಗೆ ಪೂರಕ ವಿಚಾರಗಳನ್ನು ಒದಸಿಗಲು ಕೋರಿದರು.

ಹಿಂದಿನ ಆಯವ್ಯಯ ಪೂರ್ವ ಸಮಾಲೋಚನಾ ಸಭೆಯಲ್ಲಿ ಪತ್ರಕರ್ತರು ನೀಡಿದ್ದ ಸಲಹೆಗಳು ಇನ್ನೂ ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಭೆಯಲ್ಲಿದ್ದ ಪತ್ರಕರ್ತರು ಗಮನ ಸೆಳೆದರು.  ಸಮುದಾಯ ಅಧಿಕಾರಿ ಮತ್ತಡಿ ಹಾಗೂ ಪುರಸಭೆಯ ಇಲಾಖಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts