ಬಂಟ್ವಾಳ

ಸ್ವಯಂಸೇವಾ ಸಂಸ್ಥೆಗಳ ಪಾತ್ರ ಮಹತ್ವದ್ದು

ಬಂಟ್ವಾಳ: ಸರಕಾರದ ವಿವಿಧ ಯೋಜನೆಗಳ ತಿಳುವಳಿಕೆ ಜನರಿಗೆ ಮೂಡಿಸುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಪಾತ್ರ ಮಹತ್ವದ್ದು ಎಂದು ಅಮ್ಮುಂಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಮನ ಆಚಾರ್ಯ ಹೇಳಿದರು.

ಅಮ್ಮುಂಜೆ ಮುಡಾಯಿಕೋಡಿಯಲ್ಲಿ ಕೇಂದ್ರ ಸರಕಾರದ ಕಾರ್ಮಿಕ ಶಿಕ್ಷಣ ಮಂಡಳಿ, ದಿಶಾ ಟ್ರಸ್ಟ್ ಕೈಕಂಬ, ಪ್ರಗತಿ ಕೃಷಿಕರ ಸಂಘ ಮುಡಾಯಿಕೋಡಿ ಅಮ್ಮುಂಜೆ ಜಂಟಿ ಆಶ್ರಯದಲ್ಲಿ ನಡೆದ ತರಬೇತಿ ಕಾರ್‍ಯಗಾರದ ಎರಡು ದಿನದ ಅಸಂಘಟಿತ ಕಾರ್ಮಿಕರ ತರಬೇತಿ ಕಾರ್‍ಯಗಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಪ್ರಗತಿ ಕೃಷಿಕರ ಸಂಘದ ಅಧ್ಯಕ್ಷ  ಗಾಡ್ರಿಫೆರ್ನಾಂಡಿಸ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಅಮ್ಮುಂಜೆ ಗ್ರಾ.ಪಂ.ಅಧ್ಯಕ್ಷೆ ಪ್ರೇಮಲತ ತರಬೇತಿ ಕಾರ್‍ಯಗಾರ ಉಧ್ಘಾಟಿಸಿದರು. ಅಮ್ಮುಂಜೆ ಗ್ರಾ. ಪಂ.  ಅಭಿವೃದ್ಧಿ ಅಧಿಕಾರಿ ಕವಿತಾ , ದಿಶಾ ಸಂಸ್ಥೆಯ ನಿರ್ದೇಶಕ ಸಿಲ್ವೆಸ್ಟರ್ ಡಿ’ ಸೋಜ, ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಜಾಹೀರಾತು

ಕಾರ್ಮಿಕ ಶಿಕ್ಷಣ ಮಂಡಳಿಯ ಶಿಕ್ಷಣಾಧಿಕಾರಿ  ಸತೀಶ್ ಕುಮಾರ್, ದಿಶಾ ಸಂಸ್ಥೆಯ ಸಂಯೋಜಕರಾದ ಹೆನ್ರಿ ವಾಲ್ಡರ್, ಕ್ಷೇತ್ರ ಸಂಯೋಜಕ ರುದೇಶ್ ಉಳಾಯಿಬೆಟ್ಟು ಪೆರ್ಮಂಕಿ ಪ್ರಗತಿಪರ ಕೃಷಿಕ ಆಂಟೋನಿ ಡಿ ಸೋಜ ಸಂಪನ್ಮೂಲ ವ್ಯಕ್ತಿಗಳಾಗಿ ಉದ್ಯಮವಾಗಿ ಹೈನುಗಾರಿಕೆ, ತರಕಾರಿ ಕೃಷಿ ವಿವಿಧ ಸರಕಾರಿ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ದಿಶಾ ಸಂಸ್ಥೆಯ ಕಾರ್ಯಕರ್ತೆ ಹರಿಣಾಕ್ಷಿ ಮತ್ತು  ಗುಣವತಿ, ಕೃಕರ ಸಂಘದ ಕಾರ್‍ಯದರ್ಶಿ ಲೀಲಾವತಿ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts