ಬಂಟ್ವಾಳ

ಪುರಸಭೆ ಎನ್ಓಸಿ ಇಲ್ಲದೆ ಸರಕಾರಿ ಕಟ್ಟಡಕ್ಕೆ ಅವಕಾಶ

  • ಬಂಟ್ವಾಳ ಪುರಸಭೆ ಮೀಟಿಂಗ್ ನಲ್ಲಿ ಕಾವೇರಿದ ಚರ್ಚೆ
  • ಜಿಲ್ಲಾಧಿಕಾರಿ ಕಚೇರಿಗೆ ಬರೆದ ಪತ್ರಕ್ಕೆ ವರ್ಷ ಎರಡಾದರೂ ಉತ್ತರವಿಲ್ಲ

ಬಂಟ್ವಾಳ: ಪುರಸಭೆ ಎನ್ ಒಸಿ ಪಡೆಯದೆ ಸರಕಾರಿ ಜಾಗ ಮಂಜೂರುಗೊಳ್ಳುವುದು, ಅಲ್ಲಿ ಕಟ್ಟಡ ನಿರ್ಮಾಣ ಪ್ರಕ್ರಿಯೆಗಳು ನಡೆಯುತ್ತಿವೆ. ಇಂಥದ್ದು ಸರಿಯಾ, ಸರಕಾರಿ ಕಚೇರಿ ಕಟ್ಟುವಾಗ ಪುರಸಭೆ ಅನುಮತಿ ಪಡೆದದ್ದು ಉಂಟಾ ಎಂಬ ವಿಷಯ ಬುಧವಾರ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ಕಾವೇರಿದ ಚರ್ಚೆಗೆ ಕಾರಣವಾಯಿತು.

ಜಾಹೀರಾತು

ವಿಷಯ ಪ್ರಸ್ತಾಪಿಸಿದ ಸದಸ್ಯ ಗೋವಿಂದ ಪ್ರಭು, ನಮ್ಮ ಗಮನಕ್ಕೆ ಬಾರದೆ ಕೆಲ ಸರಕಾರಿ ಕಟ್ಟಡಗಳು ತಲೆಎತ್ತಿವೆ. ಎಂದರು. ಈ ಸಂದರ್ಭ ಕೈಕುಂಜದಲ್ಲಿ ಕಟ್ಟಲಾಗುತ್ತಿರುವ ಕನ್ನಡ ಭವನದ ಪ್ರಸ್ತಾಪವೂ ಆಯಿತು. ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು , ಸದಸ್ಯರಾದ ಮಹಮ್ಮದ್ ಇಕ್ಬಾಲ್, ಪ್ರವೀಣ್ ಈ ಕುರಿತು ಮಾತನಾಡಿದರು. ಈ ಸಂದರ್ಭ ಪುರಸಭೆ ಮುಖ್ಯಾಧಿಕಾರಿ ಸುಧಾಕರ್ ಮತ್ತು ಅಧ್ಯಕ್ಷ ರಾಮಕೃಷ್ಣ ಆಳ್ವ ಮಧ್ಯಪ್ರವೇಶಿಸಿ, ಈ ಕುರಿತು ಪರಿಶೀಲಿಸುವುದಾಗಿ ಭರವಸೆ ನೀಡಿದರು.

2 ವರ್ಷ 16 ದಿನಗಳ ಹಿಂದೆ ಯೋಜನಾ ನಿರ್ದೇಶಕರಿಗೆ ಲಿಖಿತ ಮನವಿಯನ್ನು ನಾವು ನೀಡಿದ್ದೆವು. ಹಣ ಅಪವ್ಯಯದ ಕುರಿತ ಈ ಮನವಿಗೆ ಇನ್ನೂ ಉತ್ತರ ದೊರಕಿಲ್ಲ ಎಂದು ಸದಸ್ಯ ದೇವದಾಸ ಶೆಟ್ಟಿ ದೂರಿದರು.

ಈ ಸಂದರ್ಭ ಜಿಲ್ಲಾಧಿಕಾರಿಯಿಂದ ತತಕ್ಷಣ ಉತ್ತರ ಬಯಸಿದ ಸದಸ್ಯ ಗೋವಿಂದ ಪ್ರಭು, ಮುಖ್ಯಾಧಿಕಾರಿ ಬಳಿ ಕೂಡಲೇ ದೂರವಾಣಿ ಕರೆ ಮಾಡುವಂತೆ ಸೂಚಿಸಿದರು. ಆಗ ಸದಸ್ಯ ಮಹಮ್ಮದ್ ಶರೀಫ್ ಮತ್ತು ಗೋವಿಂದ ಪ್ರಭು ಮಧ್ಯೆ ಮಾತಿನ ಚಕಮಕಿ ನಡೆಯಿತು. ಒಂದು ಹಂತದಲ್ಲಿ ಗರಂ ಆದ ಗೋವಿಂದ ಪ್ರಭು, ಇದು ಸದಸ್ಯರ ಗೌರವದ ಪ್ರಶ್ನೆ, ಕಳೆದ ಬಾರಿ ಮೀಟಿಂಗ್ ಗೆ ಬಂದಾಗ ಜಿಲ್ಲಾಧಿಕಾರಿ ಸದಸ್ಯರು ಲಿಖಿತ ರೂಪದಲ್ಲಿ ಮನವಿ ನೀಡಬೇಕು ಎಂದಿದ್ದರು. ಆದರೆ ವರ್ಷ ಕಳೆದರೂ ಅವರ ಕಚೇರಿಯಿಂದಲೇ ಉತ್ತರ ಸಿಗದಿದ್ದರೆ ಏನು ಮಾಡೋಣ ಎಂದರು. ಇದರ ಇತ್ಯರ್ಥವಾಗದಿದ್ದರೆ ಮೀಟಿಂಗ್ ಮುಂದುವರಿಸುವುದು ಬೇಡ ಎಂದು ಖಡಕ್ ಆಗಿ ಪ್ರಭು ಹೇಳಿದಾಗ, ನೀವು ಮೀಟಿಂಗ್ ಮುಂದುವರಿಸಿ ಎಂದು ಶರೀಫ್ ಅಧ್ಯಕ್ಷ ರಾಮಕೃಷ್ಣ ಆಳ್ವ ಅವರಲ್ಲಿ ತಿಳಿಸಿದರು. ಇದು ಮಾತಿನ ಚಕಮಕಿಗೆ ಕಾರಣವಾಯಿತು. ಒಂದು ಹಂತದಲ್ಲಿ ಗೋವಿಂದ ಪ್ರಭು ಸಭೆಯಲ್ಲಿ ಧರಣಿ ಕುಳಿತುಕೊಳ್ಳುವವರೆಗೆ ತಲುಪಿದ್ದರು. ಕೊನೆಗೆ ಮುಖ್ಯಾಧಿಕಾರಿ ಕೆ.ಸುಧಾಕರ್, ಈ ಕುರಿತು ವಾರದೊಳಗೆ ಜಿಲ್ಲಾಧಿಕಾರಿಯಿಂದ ಉತ್ತರ ಪಡೆಯುತ್ತೇನೆ ಎಂಬಲ್ಲಿಗೆ ಚರ್ಚೆ ಅಂತ್ಯ ಕಂಡಿತು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

7 hours ago