ಬಂಟ್ವಾಳ

ಯಾರೋ ಹೆತ್ತ ಬಿಳಿಯಾನೆ ನಾವ್ಯಾಕೆ ಸಾಕೋದು?

  • ಬಂಟ್ವಾಳ ಪುರಸಭೆಯಲ್ಲಿ ಟ್ರೀ ಪಾರ್ಕ್ ನಿರ್ವಹಣೆ ಕುರಿತು ಬಿಸಿಬಿಸಿ ಚರ್ಚೆ

ಬಂಟ್ವಾಳ: ಬಹುವಿವಾದಿತ ಜೋಡುಮಾರ್ಗ ಉದ್ಯಾನವನಕ್ಕೆ ಕೋಟಿ ರೂಪಾಯಿಗೂ ಅಧಿಕ ವೆಚ್ಚ ತಗುಲಿದ್ದೇ ಇನ್ನೂ ಚರ್ಚಾಸ್ಪದ ಸಂಗತಿ. ಹೀಗಿರುವಾದ ಅದರ ನಿರ್ವಹಣೆಯನ್ನೂ ಪುರಸಭೆ ಭರಿಸಬೇಕೇ?

ಹೀಗೊಂದು ಚರ್ಚೆ ಬುಧವಾರ ರಾಮಕೃಷ್ಣ ಆಳ್ವ ಅಧ್ಯಕ್ಷತೆಯಲ್ಲಿ ನಡೆದ ಪುರಸಭಾ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಜಾಹೀರಾತು

ವಿಷಯ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ದೇವದಾಸ ಶೆಟ್ಟಿ, ಟ್ರೀ ಪಾರ್ಕ್ ಕಳೆದ ತಿಂಗಳೇ ಬಾಗಿಲು ಹಾಕಿದೆ. 15 ದಿನಗಳಲ್ಲಿ ಕೆಲಸ ಮುಗಿಯುತ್ತದೆ ಎಂದು ನಂಬಿದರೆ, ತಿಂಗಳಾದರೂ ತೆರೆಯಲಿಲ್ಲ ಎಂದರು. ರಾಷ್ಟ್ರೀಯ ಹೆದ್ದಾರಿ ಅಗಲಗೊಳಿಸುವ ಸಂದರ್ಭ ಇದೇ ಉದ್ಯಾನವನದ ಸ್ವರೂಪ ಬದಲಾಗಬಹುದು ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಮುಖ್ಯಾಧಿಕಾರಿ ಕೆ.ಸುಧಾಕರ್, ಟ್ರೀ ಪಾರ್ಕ್ ನಿರ್ವಹಣಾ ವೆಚ್ಚಕ್ಕೆ ಪುರಸಭೆ ತಿಂಗಳಿಗೆ 65 ಸಾವಿರ ರೂ ಭರಿಸುವ ಬಗ್ಗೆ ಸಭೆಯಲ್ಲಿ ವಿಷಯ ಮಂಡಿಸಿದರು. ಈ ಪ್ರಸ್ತಾಪಕ್ಕೆ ಆಡಳಿತ ಪಕ್ಷದ ಸದಸ್ಯರೂ ಸೇರಿದಂತೆ ಹಲವು ಸದಸ್ಯರು ಆಕ್ಷೇಪ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ಬಿಜೆಪಿ ಸದಸ್ಯ ಎ.ಗೋವಿಂದ ಪ್ರಭು, ಟ್ರೀ ಪಾರ್ಕ್ ಎಂಬುದು ಬಿಳಿಯಾನೆಯಂತೆ. 1.40 ಕೋಟಿ ರೂಪಾಯಿಯ ಅನಾಥ ಶಿಶು. ಅಪ್ಪ, ಅಮ್ಮ ಯಾರೆಂದು ಗೊತ್ತಿಲ್ಲದ ಟ್ರೀ ಪಾರ್ಕ್ ನಿರ್ವಹಣೆಯನ್ನು ಪುರಸಭೆ ತಲೆಗೆ ಕಟ್ಟುವುದೇಕೆ, ನಿರ್ವಹಣೆಗೆ ತಿಂಗಳಿಗೆ 65 ಸಾವಿರ ರೂಪಾಯಿ ಅಗತ್ಯವಿದೆಯೇ ಎಂದು ಪ್ರಶ್ನಿಸಿದರು.

ಈ ಸಂದರ್ಭ ಏರಿದ ಧ್ವನಿಯಲ್ಲಿ ಚರ್ಚೆ ನಡೆಯಿತು. ಮಧ್ಯಪ್ರವೇಶಿಸಿದ ಕಾಂಗ್ರೆಸ್ ಸದಸ್ಯ ಮಹಮ್ಮದ್ ಶರೀಫ್, ಒತ್ತುವರಿ ವಿಷಯಕ್ಕೆ ಸಂಬಂಧಿಸಿ ಸದಸ್ಯ ದೇವದಾಸ ಶೆಟ್ಟಿ ಪ್ರಸ್ತಾಪಿಸಿರುವುದನ್ನು ಆಕ್ಷೇಪಿಸಿದರು. ಈ ಸಂದರ್ಭ ದೇವದಾಸ ಶೆಟ್ಟಿ, ಮಹಮ್ಮದ್ ಶರೀಫ್ ನಡುವೆ ಬಿರುಸಿನ ಮಾತಿನ ಚಕಮಕಿ ನಡೆಯಿತು. ಅಧ್ಯಕ್ಷ ರಾಮಕೃಷ್ಣ ಆಳ್ವ ಮಧ್ಯಪ್ರವೇಶಿಸಿ, ಚರ್ಚೆಯನ್ನು ತಣ್ಣಗಾಗಿಸಿದರು.

ಉಪಾಧ್ಯಕ್ಷ ಮಹಮ್ಮದ್ ನಂದರಬೆಟ್ಟು, ಸದಸ್ಯರಾದ ಇಕ್ಬಾಲ್ ಗೂಡಿನಬಳಿ, ಪ್ರವೀಣ್ ಮೊದಲಾದವರು ಚರ್ಚೆಯಲ್ಲಿ ಭಾಗವಹಿಸಿದರು.

ಅಂತಿಮವಾಗಿ ಟ್ರೀ ಪಾರ್ಕ್ ನಿರ್ವಹಣೆಗೆ ಟೆಂಡರ್ ಕರೆಯುವುದು ಎಂದು ತೀರ್ಮಾನಿಸಲಾಯಿತು. ಪ್ರೊಬೆಷನರಿ ಐಎಎಸ್ ಗಾರ್ಗಿ ಜೈನ್ ಮೌನವಾಗಿ ಚರ್ಚೆಯನ್ನು ಆಲಿಸಿದರಷ್ಟೇ ಹೊರತು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

3 hours ago