ಬಂಟ್ವಾಳ

ನಿಷೇಧಿತ ಪ್ಲಾಸ್ಟಿಕ್ ಬಳಕೆ, ಅಂಗಡಿಗಳಿಗೆ ಪುರಸಭಾ ಅಧಿಕಾರಿಗಳ ದಾಳಿ

ಬಂಟ್ವಾಳ: ಪುರಸಭಾ ವ್ಯಾಪ್ತಿಯ ವಿವಿಧೆಡೆ ನಿಷೇಧಿತ ಪ್ಲಾಸ್ಟಿಕ್ ಕೈ ಚೀಲಗಳನ್ನು ಉಪಯೋಗಿಸುತ್ತಿದ್ದ ಅಂಗಡಿಗಳಿಗೆ ಪುರಸಭೆಯ ಪ್ರೊಬೆಷನರಿ ಐಎಎಸ್ ಅಧಿಕಾರಿ ಗಾರ್ಗಿ ಜೈನ್ ನೇತೃತ್ವದ ಅಧಿಕಾರಿಗಳ ತಂಡ ಬಂಟ್ವಾಳ ಪೊಲೀಸರ ಸಹಕಾರದಿಂದ ಶುಕ್ರವಾರ ದಾಳಿ ನಡೆಸಿತು.

ಬಿ.ಸಿ.ರೋಡು ಹಾಗೂ ಕೈಕಂಬ ಪರಿಸರದ ಅಂಗಡಿಗಳಿಗೆ ದಾಳಿ ನಡೆಸಿ ಅಲ್ಲಿ ಮಾರಾಟ ಮತ್ತು ಉಪಯೋಗಿಸುತ್ತದ್ದ ನಿಷೇದಿತ 121 ಕೆ.ಜಿ. ಪ್ಲಾಸ್ಟಿಕ್ ಕೈಚೀಲಗಳನ್ನು ತಂಡ ವಶಪಡಿಸಿಕೊಂಡಿತು. ನಿಷೇಧಿತ ಪ್ಲಾಸ್ಟಿಕ್, ಥರ್ಮಾಕೋಲ್ ಸಾಮಾಗ್ರಿಗಳನ್ನು ಉಪಯೋಗಿಸುತ್ತಿರುವುದು ಕಂಡು ಬಂದಲ್ಲಿ ದಂಡನೆ ವಿಧಿಸಿ ಅವರ ಉದ್ಯಮ ಪರವಾನಿಗೆಯನ್ನು ರದ್ದುಪಡಿಸಲಾಗುವುದು ಎಂದು ಗಾರ್ಗಿ ಜೈನ್ ಪ್ರಕಟನೆಯಲ್ಲಿ ಎಚ್ಚರಿಸಿದ್ದಾರೆ.

ಜಾಹೀರಾತು

ಇದೇ ವೇಳೆ ಬಂಟ್ವಾಳ ಪುರಸಭೆಗೆ ಸೇರಿದ ವಾಣಿಜ್ಯ ಮಳಿಗೆಗಳಿಂದ ಪಾವತಿಯಾಗದೆ ಉಳಿದಿದ್ದ ಬಾಡಿಗೆಯಲ್ಲಿ ಸುಮಾರು 1.82 ಲಕ್ಷ ರೂಪಾಯಿಯನ್ನು ಗಾರ್ಗಿ ಜೈನ್ ನೇತೃತ್ವದ ಅಧಿಕಾರಿಗಳ ತಂಡ ವಸೂಲಿ ಮಾಡಿತು. ಮುಂದಿನ ದಿನಗಳಲ್ಲಿ ಪುರಸಭೆಗೆ ಪುರವಾಸಿಗಳು ಪಾವತಿಸಬೇಕಾದ ನೀರಿನ ಶುಲ್ಕವನ್ನು ಕೂಡಾ ವಸೂಲಿ ಮಾಡಲಾಗುವುದು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts