ವಿಟ್ಲ

ಬಂಟ್ವಾಳ ಪುರಸಭೆ ನಿರ್ಣಯಕ್ಕೆ ಹಸ್ತಕ್ಷೇಪ ಮಾಡೋಲ್ಲ

ಬಂಟ್ವಾಳ: ಈಗಾಗಲೇ ಜಿಲ್ಲಾಧಿಕಾರಿ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಪುರಸಭೆ ನಿರ್ಣಯ ಮಾಡಿದೆ. ಹೀಗಾಗಿ ಬಂಟ್ವಾಳ ರಸ್ತೆ ಅಗಲಗೊಳಿಸುವ ವಿಚಾರದಲ್ಲಿ ನಾನು ಹಸ್ತಕ್ಷೇಪ ಮಾಡುವುದಿಲ್ಲ.

ಹೀಗೆಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಖಚಿತಪಡಿಸಿದ್ದಾರೆ.

ಜಾಹೀರಾತು

ಇದರೊಂದಿಗೆ ಬಂಟ್ವಾಳ ಪೇಟೆ, ಬಿ.ಸಿ.ರೋಡ್ ಸಹಿತ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಕೆಲವೊಂದು ಕಾಮಗಾರಿಗಳು ಪುರಸಭೆ ನಿರ್ಣಯ ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ನಿರಾತಂಕವಾಗಿ ಸಾಗಲಿದೆ ಎಂಬುದನ್ನು ಖುದ್ದು ಸಚಿವ ರೈ ತಮ್ಮ ಹೇಳಿಕೆ ಮೂಲಕ ದೃಢಪಡಿಸಿದಂತಾಗಿದೆ.

ವಿಟ್ಲ ಪ್ರೆಸ್ ಕ್ಲಬ್ ಉದ್ಘಾಟನೆ ಸಂದರ್ಭ ಸುದ್ದಿಗೋಷ್ಠಿಯಲ್ಲಿ ಉತ್ತರಿಸಿದ ಸಚಿವರು, ಈಗಾಗಲೇ ಜಿಲ್ಲಾಧಿಕಾರಿಯವರು ಈ ಸಂಬಂಧ ಅಧಿಕಾರಿಗಳು ಎರಡು ಸಭೆಗಳನ್ನು ಕೂಡಾ ನಡೆಸಿ ಬಂಟ್ವಾಳ ಪೇಟೆ ಸಹಿತ ಪುರಸಭಾ ವ್ಯಾಪ್ತಿಯ ಸರಕಾರಿ ಜಮೀನನ್ನು ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ರಸ್ತೆಗಳ ಅಗಲೀಕರಣಗೊಳಿಸಲಾಗುತ್ತಿದೆ. ಇದು ಪುರಸಭೆ ನಿರ್ಣಯಕ್ಕೆ ಸಂಬಂಧಿಸಿದ ವಿಷಯ. ಈ ವಿಚಾರದಲ್ಲಿ ನನ್ನದೇನು ಪಾತ್ರವಿಲ್ಲ ಎಂದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ