ಬಂಟ್ವಾಳ

ವಿಶ್ವ ವಿಕಲಚೇತನರ ದಿನಾಚರಣೆ

ಬಂಟ್ವಾಳ: ವಿಕಲಚೇತನರಿಗೆ ಸರಕಾರದಿಂದ ದೊರಕುವ ಎಲ್ಲಾ ಸವಲತ್ತುಗಳು ಅತ್ಯಂತ ಅಚ್ಚುಕಟ್ಟಾಗಿ ಫಲಾನುಭವಿಗಳಿಗೆ ಸಿಗುವಂತೆ ಅಧಿಕಾರಿಗಳ ಜೊತೆ ಎಲ್ಲರು ಶಕ್ತಿ ಮೀರಿ ಶ್ರಮಿಸೋಣ ಎಂದು ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ , ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಮತ್ತು ಲಯನ್ಸ್ ಹಾಗೂ ಲಯನೆಸ್ ಕ್ಲಬ್ ಬಂಟ್ವಾಳ ಸಹಯೋಗದಲ್ಲಿ ವಿಕಲ ಚೇತನ ಮಕ್ಕಳ ವಿಶ್ವ ವಿಕಲಚೇತನರ ದಿನಾಚರಣೆ ಸಭಾ ಕಾರ್‍ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಜಾಹೀರಾತು

ವಿಕಲ ಚೇತನರ ಬಗ್ಗೆ ಅನುಕಂಪ ಬೇಡ ಮಾನವೀಯತೆ ಇರಲಿ, ಅವರಿಗೆ ಯಾವುದೇ ಮನಸ್ಸಿಗೆ ನೋವು ಮಾಡದೆ ಅವರನ್ನು ನಮ್ಮವರಂತೆ ಕಾಣುವ, ಕಷ್ಟಸುಖಗಳೊಂದಿಗೆ ನಾವು ಕೈಜೋಡಿಸಿ ಮಾನವರಾಗೋಣ ಎಂದು ಹೇಳಿದರು. ಕಾರ್‍ಯಕ್ರಮದ ಅಧ್ಯಕ್ಷತೆಯನ್ನು ಬಂಟ್ವಾಳ ಲಯನ್ಸ್ ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ವಸಂತ ಬಾಳಿಗಾ ವಹಿಸಿದ್ದರು. ವೇದಿಕೆಯಲ್ಲಿ ವಲಯ 2 ಪ್ರಾಂತ್ಯ1 ರ ವಲಯಾಧ್ಯಕ್ಷ ಜಯಂತ ಶೆಟ್ಟಿ, ಬಂಟ್ವಾಳ ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷಣ್ ಕುಲಾಲ್ ಅಗ್ರಬೈಲು, ಲಯನೆಸ್ಸ್ ಕ್ಲಬ್ ಅಧ್ಯಕ್ಷೆ ದೇವಿಕಾ ದಾಮೋದರ್, ಪುತ್ತೂರು ಅಸಹಾಯಕರ ಸೇವಾ ಟ್ರಸ್ಟ್ ನ ಅಧ್ಯಕ್ಷ ನಯನ ರೈ , ವಿಠಲ ಕೇಶವ ಪ್ರಭು, ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಮತ್ತು ದೈಹಿಕ ಶಿಕ್ಷಣಾಧಿಕಾರಿ ಬಾಗೇವಾಡಿ ಉಪಸಿತರಿದ್ದರು. ಕಾರ್‍ಯಕ್ರಮದ ಬಳಿಕ ವಿಕಲ ಚೇತನ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.

ಬಿಆರ್‌ಸಿ ರಾಜೇಶ್ ಸ್ವಾಗತಿಸಿ, ಬಿಆರ್‌ಪಿ ಗಣೇಶ್ ವಂದಿಸಿದರು. ನಾರಾಯಣ ಗೌಡ ಕಾರ್‍ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.