ಕೀಳರಿಮೆ ಬಿಟ್ಟು ಮುನ್ನಡೆದರೆ ಯಶಸ್ಸು: ಮಾಣಿಲ ಸ್ವಾಮೀಜಿ

ವಿಟ್ಲ:  ಕೀಳರಿಮೆ ಬಿಟ್ಟು ಮುನ್ನಡೆದಾಗ ವಿಜಯ ನಮ್ಮದಾಗುತ್ತದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.

kulal-sangha

ಭಾನುವಾರ ಸಮುದಾಯ ಆರೋಗ್ಯ ಕೇಂದ್ರದ ಸಮೀಪದಲ್ಲಿರುವ ಸಂಘದ ನಿವೇಶನದಲ್ಲಿ ವಿಟ್ಲ ಕುಲಾಲ ಸಂಘ ವತಿಯಿಂದ ಮಹಿಳಾ ಘಟಕದ ಸಹಕಾರದೊಂದಿಗೆ 18ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಜಾಹೀರಾತು

ಪ್ರತಿಯೊಬ್ಬನ ಸಹಕಾರದಲ್ಲಿ ಸಂಘದ ಕಟ್ಟಡ ನಿರ್ಮಾಣ ಮುಂದಿನ 9 ತಿಂಗಳ ಒಳಗೆ ನಿರ್ಮಾಣವಾಗಬೇಕಾಗಿದೆ. ಇದಕ್ಕೆ ಬೇಕಾದ ಸಂಪತ್ತಿಗೆ ಯಾವ ಕೊರತೆಯೂ ಬಾರದೆ ಎಲ್ಲವನ್ನೂ ದೇವಿ ನೀಡಲಿದ್ದಾಳೆ ಎಂದು ತಿಳಿಸಿದರು.ಸ್ವಜಾತಿ ಬಾಂದವರ ಮಕ್ಕಳಿಗೆ ಪ್ರೋತ್ಸಾಹಧನ, ವಿವಿಧ ಆಟೋಟಗಳ ಬಹುಮಾನ, ಪ್ರತಿಭಾ ಪುರಸ್ಕಾರ ವಿತರಣೆ ನಡೆಯಿತು. ರಾಜ್ಯ ಕುಂಬಾರರ ಮಹಾ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್ ಉಳ್ತೂರು ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಕುಲಾಲ ಸಂಘದ ಅಧ್ಯಕ್ಷ ವೀರಪ್ಪ ಮೂಲ್ಯ ಮಲೆತ್ತಡ್ಕ ಪುಣಚ ವಹಿಸಿದ್ದರು.

ಬಂಟ್ವಾಳ ಪುರಸಭೆ ಸದಸ್ಯ ಸದಾಶಿವ ಬಂಗೇರ, ಕೊಲ್ಯ ಕುಲಾಲರ ಸಂಘದ ಉಪಾಧ್ಯಕ್ಷ ಸಂಜೀವ ಸೋಮೇಶ್ವರ, ವಿಟ್ಲ ಕುಲಾಲ ಮಹಿಳಾ ಘಟಕ ಅಧ್ಯಕ್ಷೆ ರೇವತಿ ರವೀಂದ್ರ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

ಸಂಘದ ಸ್ಥಾಪಕಾಧ್ಯಕ್ಷ ರಮಾನಾಥ ವಿಟ್ಲ ಸ್ವಾಗತಿಸಿ, ಪ್ರಸ್ತಾವನೆಗೈದರು. ಕುಲಾಲ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಕುಲಾಲ್ ವಿಟ್ಲ ವರದಿವಾಚಿಸಿದರು. ಮಹಿಳಾ ಘಟಕದ ಕೋಶಾಧಿಕಾರಿ ಮೀನಾಕ್ಷಿ ನಾರಾಯಣ ಪುಣಚ ಬಹುಮಾನಿತರ ಪಟ್ಟಿ ಓದಿದರು. ಸಂಘಟನಾ ಕಾರ್ಯದರ್ಶಿ ದಿವಾಕರ ಕೋಡಿ ವಿಟ್ಲ ವಂದಿಸಿದರು. ಗೋಪಾಲಕೃಷ್ಣ ನೇರಳಕಟ್ಟೆ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕೀಳರಿಮೆ ಬಿಟ್ಟು ಮುನ್ನಡೆದರೆ ಯಶಸ್ಸು: ಮಾಣಿಲ ಸ್ವಾಮೀಜಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*