ಬಂಟ್ವಾಳ

ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ

ಬಂಟ್ವಾಳ: ನರಿಕೊಂಬು ವಿವೇಕಪುರ ವಿವೇಕ ಜಾಗೃತ ಬಳಗದ ವತಿಯಿಂದ  ಶ್ರೀ ಗುರೂಜೀ ಸ್ವಾಮಿ ವಿವೇಕಾನಂದರ ವಿವೇಕ ಕಿರಣ ಮಂದಿರದ ಅಷ್ಟಮ ವರ್ಧಂತ್ಯುತ್ಸವ ಹಾಗೂ ಶ್ರೀ ಗುರು ಚರಿತಾಮೃತ ಪ್ರವಚನ ಸಪ್ತಾಹ ಕಾರ್ಯಕ್ರಮವು ಡಿ.11ರಿಂದ ಡಿ.18ರವರೆಗೆ ನರಿಕೊಂಬು ವಿವೇಕ ಕಿರಣ ಮಂದಿರದಲ್ಲಿ ಜರಗಲಿದೆ.

ಕಾರ್ಯಕ್ರಮದ ಪ್ರಯುಕ್ತ ಪ್ರತಿದಿನ ಸಂಜೆ 5 ರಿಂದ ಮೈಸೂರು ಕೇಂದ್ರೀಯ ಭಾಷಾ ಸಂಸ್ಥಾನಂ ಇದರ ಭಾಷಾ ಅನುವಾದಕ ವಾಸುದೇವ ಲ.ಭಟ್ ಇವರಿಂದ ಶ್ರೀ ಗುರು ಚರಿತಾಮೃತ ಪ್ರವಚನ ಸಪ್ತಾಹ ನಡೆಯಲಿದೆ.

ಡಿ.11ರಂದು ಮಧ್ಯಾಹ್ನ 2.30 ಕ್ಕೆ ಶ್ರೀ ಕ್ಷೇತ್ರ ಕಟೀಲಿನ ಪ್ರ.ಅರ್ಚಕ ವೇ.ಮೂ.ಕಮಲಾದೇವಿಪ್ರಸಾದ ಆಸ್ರಣ್ಣ ಅವರು ಸಪ್ತಾಹವನ್ನು ಉದ್ಘಾಟಿಸಲಿರುವರು.

ಜಾಹೀರಾತು

ಡಿ.18ರಂದು ವರ್ಧಂತ್ಯುತ್ಸವ ನಡೆಯಲಿದ್ದು ಸಂಜೆ ಸಭಾ ಕಾರ್ಯಕ್ರಮದಲ್ಲಿ ಬಂಟ್ವಾಳ ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಜಯಂತ್ ಶೆಟ್ಟಿ ಅಧ್ಯಕ್ಷತೆ ವಹಿಸುವರು. ಸಾಲಿಗ್ರಾಮ ಡಿವೈನ್ ಪಾರ್ಕ್‌ನ ಸುದೇಶ್ ರಾವ್, ಯುವ ಬ್ರಿಗೇಡ್ ಸಂಚಾಲಕ ಶ್ರೀಕೃಷ್ಣ ಉಪಾಧ್ಯಾಯ ಅತಿಥಿಗಳಾಗಿ ಭಾಗವಹಿಸಲಿರುವರು. ಮಧ್ಯಾಹ್ನ 1.30 ರಿಂದ ಯಕ್ಷ ಗೀತ ವೈಭವ , ಸಂಜೆ ಸಾಂಸ್ಕೃತಿಕ ಸಂಧ್ಯಾ, ಶಿವ ಪಂಚಾಕ್ಷರಿ ಮಹಾತ್ಮೆ ಯಕ್ಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ