Categories: Uncategorized

ದೌರ್ಜನ್ಯ, ಅತ್ಯಾಚಾರ ಪ್ರಕರಣ ದುರ್ದೈವದ ಸಂಗತಿ

ಬಂಟ್ವಾಳ: ಸಮಾನತೆಗಾಗಿ ಮಹಿಳಾ ಸಂಘಟನೆಗಳು ಹೋರಾಟ ಮತ್ತು ಆಂದೋಲನ ಮಾಡುವುದು ಕಾಣಲು ಸಿಗುತ್ತದೆ. ಮತ್ತೊಂದೆಡೆ ಸ್ತ್ರೀಯರ ಮೇಲೆ ಹಿಂದೆಂದಿಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿರುವುದು ದುರ್ದೈವದ ಸಂಗತಿಯಾಗಿದೆ ಎಂದು ದ.ಕ ರಣರಾಗಿಣಿ ಶಾಖೆಯ ಲಕ್ಷ್ಮೀ ಪೈ ಅವರು ಹೇಳಿದರು.

ಬಂಟ್ವಾಳ ತಾಲೂಕು ರಾಯಿ ಸಮೀಪದ ಕುದ್ಕೋಳಿ ಕೇಂದ್ರ ಮೈದಾನದಲ್ಲಿ ಜರಗಿದ ಹಿಂದು ಧರ್ಮ ಜಾಗೃತಿ ಸಭೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಜಾಹೀರಾತು

ಉದ್ಯಮಿ ದಿನೇಶ್ ಎಂ.ಪಿ. ಅವರು ಕಾರ್ಯಕ್ರಮ ಉದ್ಘಾಟಿಸಿದರು.

ಸನಾತನ ಸಂಸ್ಥೆಯ ಸಂಗೀತಾ ಪ್ರಭು ಮಾತನಾಡಿ ನಾವು ಜನರಿಗೆ ಶ್ರದ್ಧೆ ಅಂದರೆ ಏನು ಎಂದು ಕೇವಲ ಹೇಳುವುದು ಮಾತ್ರವಲ್ಲ, ಅದನ್ನು ಅಚರಣೆಗೆ ತಂದು ತೋರಿಸಿದ್ದೇವೆ ಎಂದು ಹೇಳಿದರು.

ಹಿಂದೂ ಜನಜಾಗೃತಿ ಸಮಿತಿ ಜಿಲ್ಲಾ ಸಮನ್ವಯಕ ವಿಜಯ ಕುಮಾರ ಮಾತನಾಡಿ ದೇಶದಲ್ಲಿ ಜಾತ್ಯಾತೀತ ಸರಕಾರವಿದೆ. ಹಾಗಾಗಿ ಸಮಾನ ನಾಗರಿಕ ಕಾನೂನು ಸಹ ಇರಬೇಕು ಎಂದು ಹೇಳಿದರು.

ಮಾವಿನಕಟ್ಟೆ ಹಿಂದೂ ಜಾಗರಣಾ ವೇದಿಕೆ ಶಿವಾನಂದ, ರಾಯಿ ಬದನಡಿ ಷಣ್ಮುಖ ಭಜನಾ ಮಂಡಳಿ ಅಧ್ಯಕ್ಷ ದಯಾನಂದ ಸಪಲ್ಯ, ಮಾವಿನಕಟ್ಟೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಉಮೇಶ್ ಮತ್ತಿತರರು ಉಪಸ್ಥಿತರಿದ್ದರು.  ಹಿಂದೂ ಜನಜಾಗೃತಿ ಸಮಿತಿ ದ.ಕ ಜಿಲ್ಲಾ ಸಮನ್ವಯಕರಾದ ಪ್ರಭಾಕರ ಪಡಿಯಾರ್ ಅವರು ಹಿಂದೂ ಜನಜಾಗೃತಿ ಸಮಿತಿಯ ಪರಿಚಯಿಸಿ ಸ್ವಾಗತಿಸಿದರು.ಕು.ಚೇತನಾ ಪ್ರಭು ಅವರು ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.