ಜಿಲ್ಲಾ ಸುದ್ದಿ

’ಶ್ರೀ’ ಪಡ್ರೆಯವರಿಗೆ ’ಕುಸುಮಾಶ್ರೀ’ ಪ್ರಶಸ್ತಿ

ಕುಂದಾಪುರ ನಾಗೂರಿನ ಕುಸುಮಾ ಫೌಂಡೇಶನ್ ಇವರು ಪ್ರಾಯೋಜಿಸುವ ಕುಸುಮಾಶ್ರೀ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಶ್ರೀ ಪಡ್ರೆಯವರು ಭಾಜನರಾಗಿದ್ದಾರೆ. ದಶಂಬರ 11ರಂದು ಸಂಜೆ ನಾಗೂರಿನ ಕುಸುಮ ಸಂಸ್ಥೆಯ ವಠಾರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ.

   ಶ್ರೀ ಪಡ್ರೆಯವರು ನೆಲಜಲ ಸಂರಕ್ಷಣೆ, ಅಲಕ್ಷಿತ ಬೆಳೆ ಹಲಸು, ಕೃಷಿಕರ ಕೈಗೆ ಲೇಖನಿ ಮೊದಲಾದ ಆಂದೋಳನಗಳಿಗೆ ಶ್ರೀಕಾರ ಬರೆದವರು. ಅಡಿಕೆ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ. ಕನ್ನಾಡಿನ ವಿವಿಧ ಪತ್ರಿಕೆಗಳ ಅಂಕಣಗಾರರು. ಈಚೆಗೆ ಪುತ್ತೂರಿನಲ್ಲಿ ದೇಶದಲ್ಲೇ ಮೊತ್ತ ಮೊದಲ ಬಾರಿಗೆ ಜರುಗಿದ ವಾಟ್‌ಆಪ್ ಪತ್ರಿಕೋದ್ಯಮ ಶಿಬಿರದ ರೂವಾರಿ. ತಿರುವನಂತಪುರಂನ ಜಾಕ್‌ಫ್ರುಟ್ ಪ್ರೊಮೋಶನ್ ಕೌನ್ಸಿಲ್ ಮತ್ತು ಶಾಂತಿಗ್ರಾಮ ಸಂಸ್ಥೆಯು ಈಚೆಗೆ ಶ್ರೀ ಪಡ್ರೆಯವರಿಗೆ ಹಲಸಿನ ಅಂತಾರಾಷ್ಟ್ರೀಯ ರಾಯಭಾರಿ ಎಂದು ಗೌರವಿಸಿತ್ತು. ಇದಕ್ಕೂ ಮೊದಲು ಕೊಚ್ಚಿಯ ದಿಶಾ ಟ್ರಸ್ಟ್ ಅವರಿಗೆ ಇದೇ ಕೆಲಸಕ್ಕಾಗಿ ದಿಶಾ ಗ್ರೀನ್ ಗ್ಲೋಬ್ ಪ್ರಶಸ್ತಿ ನೀಡಿತ್ತು.  ಕನ್ನಡ, ಇಂಗ್ಲೀಷ್ ಭಾಷೆಗಳಲ್ಲಿ ಹದಿನೈದು ಕೃತಿಗಳ ರಚಯಿತರು. ಈಚೆಗೆ ಫಾರ್ಮರ್ ಫಸ್ಟ್ ಟ್ರಸ್ಟ್ ಮತ್ತು ಕೃಷಿ ಮಾಧ್ಯಮ ಕೇಂದ್ರ ಪ್ರಕಾಶಿಸಿದ ಅಲಕ್ಷಿತ ಕಲ್ಪವೃಕ್ಷ ಹಲಸು ಭವಿಷ್ಯದ ಬೆಳೆ ಎನ್ನುವ ಕೃತಿಯು ಹದಿನಾರನೆಯದು. ರಾಷ್ಟ್ರೀಯ, ರಾಜ್ಯ ಪ್ರಶಸ್ತಿ, ಪುರಸ್ಕಾರಗಳನ್ನು ಪಡೆದೆ ಶ್ರೀ ಪಡ್ರೆಯವರಿಗೆ ಈಗ ಕುಸುಮಾಶ್ರೀ ಪ್ರಶಸ್ತಿಯ ಗೌರವ.

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.