ಬಂಟ್ವಾಳ :ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಎಂಬಲ್ಲಿನ ಅಕ್ರಮ ಮರಳು ಘಟಕಕ್ಕೆ ಪ್ರೊಬೆಷನರಿ ಐಎಎಸ್ ಗಾರ್ಗಿ ಜೈನ್ ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಮತ್ತು ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ
ಸ್ಥಳೀಯ ಫಲ್ಗುಣಿ ನದಿಯಿಂದ ಮರಳು ತೆಗೆಯುವ ಕೂಲಿ ಕಾರ್ಮಿಕರಿಗೆ ತಂಗಲು ನಿರ್ಮಿಸಲಾಗಿದ್ದ 5 ಶೆಡ್ಡುಗಳನ್ನು ಮತ್ತು ಪರಿಕರಗಳನ್ನು ಕಂದಾಯ ಅಧಿಕಾರಿಗಳು ತೆರವು ಗೊಳಿಸಿ ಎಚ್ಚರಿಕೆ ನೀಡಿದರು
ಫಲ್ಗುಣಿ ನದಿಯಿಂದ ಕಳೆದ ಹಲವಾರು ವರ್ಷಗಳಿಂದ ನಡೆಸಲಾಗುತ್ತಿದ್ದ ಅಕ್ರಮ ಮರಳು ಸಾಗಾಟದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದರು ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖಾಧಿಕಾರಿಗಳು ದಾಳಿ ನಡೆಸಿ ಜಾಗೃತಿ ಮೂಡಿಸಿದ್ದಾರೆ
ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ. ಕೆ. ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರದೀಪ್, ಪ್ರಶಾಂತ್ ಹಾಗೂ ಸಿಬ್ಬಂದಿ ರೂಪೇಶ್ ದಾಳಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ