ಬಂಟ್ವಾಳ

ಅಕ್ರಮ ಮರಳು ಘಟಕಕ್ಕೆ ದಾಳಿ

ಬಂಟ್ವಾಳ :ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪಾಡಿ ಎಂಬಲ್ಲಿನ ಅಕ್ರಮ ಮರಳು ಘಟಕಕ್ಕೆ ಪ್ರೊಬೆಷನರಿ ಐಎಎಸ್ ಗಾರ್ಗಿ ಜೈನ್ ಅವರ ನೇತೃತ್ವದಲ್ಲಿ ಕಂದಾಯ ಅಧಿಕಾರಿಗಳು ಮತ್ತು ಗ್ರಾಮಾಂತರ ಪೊಲೀಸ್ ಅಧಿಕಾರಿಗಳು ಜಂಟಿ  ಕಾರ್ಯಾಚರಣೆ  ನಡೆಸಿದ್ದಾರೆ
ಸ್ಥಳೀಯ ಫಲ್ಗುಣಿ ನದಿಯಿಂದ ಮರಳು ತೆಗೆಯುವ ಕೂಲಿ ಕಾರ್ಮಿಕರಿಗೆ ತಂಗಲು ನಿರ್ಮಿಸಲಾಗಿದ್ದ 5 ಶೆಡ್ಡುಗಳನ್ನು ಮತ್ತು ಪರಿಕರಗಳನ್ನು ಕಂದಾಯ ಅಧಿಕಾರಿಗಳು ತೆರವು ಗೊಳಿಸಿ ಎಚ್ಚರಿಕೆ ನೀಡಿದರು
ಫಲ್ಗುಣಿ ನದಿಯಿಂದ ಕಳೆದ ಹಲವಾರು ವರ್ಷಗಳಿಂದ ನಡೆಸಲಾಗುತ್ತಿದ್ದ ಅಕ್ರಮ ಮರಳು ಸಾಗಾಟದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದರು ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖಾಧಿಕಾರಿಗಳು ದಾಳಿ ನಡೆಸಿ ಜಾಗೃತಿ ಮೂಡಿಸಿದ್ದಾರೆ
ಪಾಣೆಮಂಗಳೂರು ಕಂದಾಯ ನಿರೀಕ್ಷಕ ರಾಮ. ಕೆ. ಗ್ರಾಮ ಲೆಕ್ಕಾಧಿಕಾರಿಗಳಾದ ಪ್ರದೀಪ್, ಪ್ರಶಾಂತ್ ಹಾಗೂ ಸಿಬ್ಬಂದಿ ರೂಪೇಶ್ ದಾಳಿ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ