ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ್ ಮಿಷನ್ ಅಭಿಯಾನದಡಿ 51 ನೇ ವಾರದ ಕಾರ್ಯಕ್ರಮದಡಿ ಗುರುವಾರ ಬಿ.ಮೂಡ ಗ್ರಾಮದ ಕೈಕುಂಜೆ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು.
ನಂತರ ಕೈಕುಂಜೆ ಪರಿಸರದ 190 ಮನೆಗಳಿಗೆ ತ್ಯಾಜ್ಯ ಸಂಗ್ರಹಣಾ ಬಕೆಟ್ಗಳನ್ನು ವಿತರಿಸಲಾಯಿತು.
ಪುರಸಭಾ ಸದಸ್ಯರಾದ ಸುಗುಣ ಕಿಣಿ, ಮೊಹಮ್ಮದ್ ಇಕ್ಬಾಲ್, ಪತ್ರಕರ್ತ ಹರೀಶ್ ಮಾಂಬಾಡಿ, ಕಸಾಪ ಮಾಜಿ ಅಧ್ಯಕ್ಷ ತಮ್ಮಯ್ಯ, ರಮೇಶ್ ಸಾಲ್ಯಾನ್, ವೇದವ್ಯಾಸ, ಪುರಸಭಾ ಆರೋಗ್ಯ ಅಧಿಕಾರಿ ಪ್ರಸಾದ್, ಪುರಸಭಾ ಸಮುದಾಯ ಅಭಿವೃದ್ಧಿ ಅಧಿಕಾರಿ ಮತ್ತಡಿ, ಸಮುದಾಯ ಸಂಘಟಕಿ ಉಮಾವತಿ ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)