ಬಂಟ್ವಾಳ: ನಗ್ರಿಯ ಶಾರದಾ ಭಜನಾ ಮಂದಿರದಲ್ಲಿ ಬಂಟ್ವಾಳದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕೇಂದ್ರಗಳ ದಿನಾಚರಣೆ ಹಾಗೂ ಮಹಿಳಾ ವಿಚಾರಗೋಷ್ಠಿ ನಡೆಯಿತು.
ಮೂರ್ಕಜೆ ಮೈತ್ರೇಯಿ ಗುರುಕುಲದ ಮಾತಾಜಿ ಶ್ರೀಮತಿ ಉಪನ್ಯಾಸ ನೀಡಿದರು. ಗ್ರಾಮ ಪಂಚಾಯಿತಿ ಸದಸ್ಯ ವಿಶ್ವನಾಥ ಬೆಳ್ಚಾಡ ಉದ್ಘಾಟಿಸಿದರು. ತಾಲೂಕು ಯೋಜನಾಧಿಕಾರಿ ಸುನೀತಾ ನಾಯಕ್ ಯೋಜನೆ ಮಾಹಿತಿ ನೀಡಿದರು. ನಗ್ರಿ ಯುವಕ ಮಂಡಲ ಅಧ್ಯಕ್ಷ ಚೇತನ್ ಅಧ್ಯಕ್ಷತೆ ವಹಿಸಿದ್ದರು.
ರೂಪಾ, ಶಾರದಾ ಅನುಭವ ಹಂಚಿಕೊಂಡರು.
ನಿಕಟಪೂರ್ವ ವಲಯಾಧ್ಯಕ್ಷರಾದ ಚಂದ್ರಹಾಸ, ಸಜೀಪಮೂಡ ಬಿ ಒಕ್ಕೂಟದ ಅಧ್ಯಕ್ಷ ಉಗ್ಗಪ್ಪ ವಲಯದ ಮೇಲ್ವಿಚಾರಕರಾದ ನವೀನ್ ಶೆಟ್ಟಿ ಉಪಸ್ಥಿತರಿದ್ದರು. ವೀಣಾ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)