ಇರಾ ಗ್ರಾಮಪಂಚಾಯತ್ ವತಿಯಿಂದ ನಿವೇಶನ ರಹಿತ ಗ್ರಾಮ ಸಭೆಯು ಇರಾ ಮಲಯಾಳಿ ಬಿಲ್ಲವ ಸಭಾ ಭವನದಲ್ಲಿ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಅಬ್ದುಲ್ ರಝಾಕ್ ಕುಕ್ಕಾಜೆ ಅವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷರು ಇರಾ ಗ್ರಾಮದ ಕಂಡದಟ್ಟು ಎಂಬಲ್ಲಿ ಗ್ರಾಮದ ನಿವೇಶನ ರಹಿತ ಬಡವರಿಗಾಗಿ ಸುಮಾರು ಹನ್ನೆರಡು ಎಕರೆ ಜಮೀನನ್ನು ಈಗಾಗಲೇ ಕಾದಿರಿಸಿದ್ದು ಇದನ್ನು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ವಿತರಿಸುವ ಪ್ರಕ್ರಿಯೆ ನಡೆಯಲಿದ್ದು ಅರ್ಹರು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿ ವಿನಂತಿಸಿದರು.
ಗ್ರಾಮ ಕರಣಿಕರಾದ ಎ.ಪಿ ಭಟ್ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ತಿತರಿದ್ದರು.ಪಂ.ಅ.ಅಧಿಕಾರಿ ಪ್ರಕಾಶ್ ಯಸ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿ ಪಂಚಾಯತ್ ಸಿಬ್ಬಂದಿ ಶ್ರೀಮತಿ ಗುಲಾಬಿ ಧನ್ಯವಾದ ಸಲ್ಲಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ