ಬಂಟ್ವಾಳ

ರಾಷ್ಟ್ರಮಟ್ಟದ ಕರಾಟೆ ಸ್ಪರ್ಧಾ ವಿಜೇತರಿಗೆ ಅಭಿನಂದನೆ

ಬಂಟ್ವಾಳ: ಮಂಗಳೂರಿನ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ವೆಸ್ಟರ್ನ್ ಇನ್ಸ್ಟಿಟೈಟ್ ಆರ್ಪ ಮಾರ್ಷಲ್ ಆರ್ಟ್ ಸಂಸ್ಥೆ ಆಯೋಜಿಸಿದ್ದ  ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟದ ವೈಟ್ ಬೆಲ್ಟ್ ವಿಭಾಗದ  ವೈಯಕಿಕ ಕುಮಿಟೆ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದ ದಡ್ಡಲಕಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಏಳನೇ ತರಗತಿ ವಿದ್ಯಾರ್ಥಿ ವಿಕೇಶ್‌ನನ್ನು ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ವತಿಯಿಂದ ಅಭಿನಂದಿಸಲಾಯಿತು.

ದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್ ಶಾಲು ಹೊದಿಸಿ ಅಭಿನಮದಿಸಿದರು. ಅವರು  ಮಾತನಾಡಿ ಸರಕಾರಿ ಶಾಲೆಯ ವಿದ್ಯಾರ್ಥಿ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಗೆದ್ದಿರುವುದು ಹೆಮ್ಮೆ ತಂದಿದೆ. ಈ ಪ್ರೇರಣೆ ಪಡೆದು ಸರಕಾರಿ ಶಾಲೆಗಳ ಎಲ್ಲಾ ವಿಧ್ಯಾರ್ಥಿಗಳು ಸಾಧನೆ ಮಾಡುವಂತೆ ಅವರು ಆಶಿಸಿದರು. ಶಾಲೆಯ ಮುಖ್ಯೋಪಾಧ್ಯಾಯ ಮೌರೀಸ್ ಡಿಸೋಜಾ, ಸಹಶಿಕ್ಷಕಿ ಹಿಲ್ಡಾ ಫೆರ್ನಾಂಡೀಸ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಪೂವಪ್ಪ ಮೆಂಡನ್, ಸದಸ್ಯ ರಾಮಚಂದ್ರ ಕರೆಂಕಿ, ಕರಾಟೆ ತರಬೇತುದಾರ ಅಶೋಕ್ ಆಚಾರ್ಯ  ಹಾಜರಿದ್ದರು.

ಜಾಹೀರಾತು
ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.