ಕಂಬಳಬೆಟ್ಟು ಶಾಂತಿನಗರದಲ್ಲಿ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ

ವಿಟ್ಲ: ಕಂಬಳಬೆಟ್ಟು ಸೌಹಾರ್ದ ಫ್ರೆಂಡ್ಸ್‌ನ ದಶಮಾನೋತ್ಸವದ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಸಹಭಾಗಿತ್ವದಲ್ಲಿ ಆಹ್ವಾನಿತ ತಂಡಗಳ ಪ್ರೋ ಮಾದರಿಯ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ ಪಂದ್ಯಾಟ ಡಿ.25 ರಂದು ಮಧ್ಯಾಹ್ನ 12 ಗಂಟೆಗೆ ಕಂಬಳಬೆಟ್ಟು ಶಾಂತಿನಗರದಲ್ಲಿ ನಡೆಯಲಿದೆ ಎಂದು ಸಂಚಾಲಕ ಎ ಎಂ ಶಾಕೀರ್ ಅಳಿಕೆಮಜಲು ಹೇಳಿದರು.

ಸಾಂದರ್ಭಿಕ ಚಿತ್ರ

ಸಭಾಕಾರ್ಯಕ್ರಮ ಸಂಜೆ 4 ಗಂಟೆಗೆ ನಡೆಯಲ್ಲಿದ್ದು, ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ನಡೆಸಲಿದ್ದು, ಅಧ್ಯಕ್ಷತೆಯನ್ನು ಪುತ್ತೂರು ಶಾಸಕಿ ಶಕುಂತಳಾ ಟಿ ಶೆಟ್ಟಿ ವಹಿಸಲಿದ್ದಾರೆ. ದಕ್ಷಿಣಕನ್ನಡ, ಕಾಸರಗೋಡಿ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಯ ಆಹ್ವಾನಿತ 18 ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಲಿದೆ. ಪದ್ಯಾಂಟ ವೀಕ್ಷಿಸಲು ವಿಶೇಷ ಗ್ಯಾಲರಿಯ ವ್ಯವಸ್ಥೆ ಮಾಡಲಾಗಿದ್ದು, ಸುಮಾರು 4 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ವಿಟ್ಲದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಆಹಾರ ಸಚಿವ ಯು ಟಿ ಖಾದರ್, ಮುಖ್ಯ ಸಚೇತಕ ಐವನ್ ಡಿಸೋಜ, ಜಾತ್ಯಾತೀಯ ಜನತಾದಳದ ಯುವ ನಾಯಕ ಪ್ರಜ್ವಲ್ ರೇವಣ್ಣ ಗೌಡ, ಅನಿವಾಸಿ ಭಾರತೀಯ ಉದ್ಯಮಿ ಮಾವೆ ದಿನಕರ ಭಟ್ ಭಾಗವಹಿಸಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಚೆಯರ್ ಮ್ಯಾನ್ ರಾಕೇಶ್ ಮಲ್ಲಿ ವಹಿಸಲಿದ್ದು, ರೈ ಎಸ್ಟೇಟ್‌ನ ಅಶೋಕ್ ಕುಮಾರ್ ರೈ, ಜೆಡಿಎಸ್ ಜಿಲ್ಲಾಧ್ಯಕ್ಷ ಮಹಮ್ಮದ್ ಕುಂಞ್ಞಿ ವಿಟ್ಲ, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಹನೀಫ್ ಖಾನ್ ಕೊಡಾಜೆ, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮಿಥುನ್ ರೈ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಅಕ್ಷಿತ್ ಸುವರ್ಣ, ವಿಟ್ಲ ಠಾಣೆಯ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ, ಜಯಕರ್ನಾಟಕ ಪುತ್ತೂರು ಕಾರ್ಯಧ್ಯಕ್ಷ ಜಗದೀಶ್ ನೆಟ್ಟಿ ನೆಲ್ಲಿಕಟ್ಟೆ, ಉದ್ಯಮಿ ಸುಬ್ರಾಯ ಪೈ ಸೇರಿ ವಿವಿಧ ಗಣ್ಯರು ಭಾಗವಹಿಸುವರು ಎಂದರು.

ಜಾಹೀರಾತು

ಸಂಚಾಲಕ ಹಮೀದ್ ಕಂಬಳಿಬೆಟ್ಟು ಜೆಡಿಎಸ್ ಮಾತನಾಡಿ ತರ್ಡ್ ಅಂಪೈಯರ್ ವ್ಯವಸ್ಥೆಯನ್ನು ಮಾಡಲಾಗಿದೆ. ಮಲಯಾಳಂ ಚಲನ ಚಿತ್ರ ನಟಿ ಡಾ. ದಿಶಾ ದಿನಕರ್ ಭಾಗವಹಿಸಲಿದ್ದು, ಸುಡುಮಡ್ಡು ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎಂದು ಹೇಳಿದರು.

ಪ್ರಥಮ ಬಹುಮಾನವಾಗಿ 40 ಸಾವಿರ, ದ್ವಿತೀಯ ಬಹುಮಾನವಾಗಿ ೩೦ಸಾವಿರ,  ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ತಲಾ 15 ಸಾವಿರ ಮತ್ತು ಸೌಹಾರ್ದ ಟ್ರೋಫಿಯನ್ನು ನೀಡಲಾಗುವುದು. ಇತರ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು. ರಾಷ್ಟ್ರಮಟ್ಟದ ಕಬಡ್ಡಿ ಕ್ರೀಡಾ ಪಟುಗಳಾದ ಗಾಯತ್ರಿ, ಭರತ್, ರಶೀದ್ ಬನಾರಿ, ಹಿರಿಯ ಕಬಡ್ಡಿ ಆಟಗಾರರಾದ ಜಬ್ಬಾರ್ ಅವರನ್ನು ಈ ಸಂದರ್ಭ ಸನ್ಮಾನಿಸಲಾಗುವುದು ಎಂದು ಹೇಳಿದರು.

ಅಧ್ಯಕ್ಷ ಅಬ್ದುಲ್ ಗಫೂರ್ ನೂಜಿ, ಉಪಾಧ್ಯಕ್ಷ ರಜಾಕ್ ಮಟನ್, ಕೋಶಾಧಿಕಾರಿ ಅಬೂಬಕ್ಕರ್ ಕೊಳಂಬೆ, ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಮಸೂದ್ ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಂಬಳಬೆಟ್ಟು ಶಾಂತಿನಗರದಲ್ಲಿ ಹಗಲು ರಾತ್ರಿಯ ಮ್ಯಾಟ್ ಕಬಡ್ಡಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*