ಬಂಟ್ವಾಳ

ಪಡಿತರ ವಿತರಣಾ ವ್ಯವಸ್ಥೆ ಪರಿಶೀಲನೆ, ಸರಿಪಡಿಸಲು ಸೂಚನೆ

ಬಂಟ್ವಾಳ: ಸಾರ್ವಜನಿಕರ ದೂರಿನನ್ವಯ ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಮತ್ತು ತಂಡ ಸಿದ್ದಕಟ್ಟೆ ಪಡಿತರ ಸೊಸೈಟಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸಿದ್ಧಕಟ್ಟೆ ಸಹಕಾರಿ ವ್ಯವಸಾಯಿಕ ಬ್ಯಾಂಕ್ ಲಿ. ಪಡಿತರ ಸೊಸೈಟಿಯಲ್ಲಿ ಸಾಮಗ್ರಿಗಳು ಸರಿಯಾಗಿ ಸಿಗುತ್ತಿಲ್ಲ, ನಾಮಫಲಕವೂ ಇಲ್ಲ ಎಂಬ ದೂರು ಗ್ರಾಮಸಭೆಯಲ್ಲಿ ಕೇಳಿಬಂದಿತ್ತು.

ಜಾಹೀರಾತು

ಈ ಹಿನ್ನೆಲೆಯಲ್ಲಿ ನ್ಯಾಯಬೆಲೆಯಲ್ಲಿ ದಾಸ್ತಾನು ಇರಿಸಲಾದ ಪಡಿತರ ಸಾಮಗ್ರಿಗಳನ್ನು ಪರಿಶೀಲಿಸಿದ ಅವರು, ಪಡಿತರ ಗ್ರಾಹಕರ ಹಿತಾಸಕ್ತಿ ಅನುಸರಿಸಿ ಅಗತ್ಯ ಪ್ರಕಟಣೆಯನ್ನುಸೂಚನಾ ಫಲಕದಲ್ಲಿ ಪ್ರಕಟಿಸುವಂತೆ ಆದೇಶಿಸಿದರು.

ಅಂಗಡಿಯಲ್ಲಿ ಸ್ವಚ್ಛತೆ ಕಾಪಾಡುವಂತೆ ಅವರು ಎಚ್ಚರಿಸಿದ್ದು ಇಂಥ ದೂರುಗಳು ಬಂದರೆ ಶಿಸ್ತುಕ್ರಮದ ಶಿಫಾರಸು ಮಾಡುವುದಾಗಿ ತಿಳಿಸಿದರು. ಈ ಸಂದರ್ಭ ಗ್ರಾಮ ಕರಣಿಕ ಜನಾರ್ಧನ, ಪ್ರವೀಣ್ ಕುಮಾರ್, ಸಿಬ್ಬಂದಿಗಳಾದ ವೆಂಕಟರಮಣ, ಸತೀಶ್ ಜೊತೆಗಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ