ಬಂಟ್ವಾಳ

ಪಶ್ಚಿಮ ಘಟ್ಟದ ಮಹತ್ವ ಅರಿವು ಅಗತ್ಯ: ದಿನೇಶ್ ಹೊಳ್ಳ

ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ಸಂಚಾಲಕರಾದ ದಿನೇಶ್ ಹೊಳ್ಳ ಹೇಳಿದರು.

ಎಲ್ಲ ನದಿಗಳ ಮೂಲಗಳೂ ಪಶ್ಚಿಮಘಟ್ಟದಲ್ಲಿವೆ. ಹಾಗಾಗಿ ಪಶ್ಚಿಮಘಟ್ಟಗಳ ಅಳಿವು ಉಳಿವಿನ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಮನುಷ್ಯರ ಹಾಗೆಯೇ ಪ್ರಾಣಿಗಳಿಗೂ ಬದುಕುವ ಹಕ್ಕು ಇದೆ ಎಂದು ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ನಡೆದ ‘ಪಶ್ಚಿಮ ಘಟ್ಟಗಳ ಅಳಿವು-ಉಳಿವು’ ಉಪನ್ಯಾಸದಲ್ಲಿ ಮಾಹಿತಿ ನೀಡಿದರು.

ಜಾಹೀರಾತು

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪ್ರಕೃತಿಯ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಯುವ ಹಾಗೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಜೀವನದಲ್ಲಿ ಪ್ರಗತಿ ಹೊಂದಬೇಕಾದರೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಬೇಕು ಎಂದರು.

ಉಪನ್ಯಾಸಕರಾದ ಬಾಲಕೃಷ್ಣ ಗೌಡ, ಚೇತನ್ ಮುಂಡಾಜೆ, ಪ್ರದೀಪ್ ಪೂಜಾರಿ, ಶಿವಪ್ರಸಾದ್. ಕಾವ್ಯಶ್ರೀ, ನಮಿತಾ ಬಿ.ಎಲ್. ಉಪಸ್ಥಿತರಿದ್ದರು.ವಿಜ್ಞಾನ ಸಂಘದ ಕಾರ್ಯದರ್ಶಿ ವಿಲಾಸ್ ಸ್ವಾಗತಿಸಿ, ದಿಗಂತ್ ಎಸ್. ವಂದಿಸಿದರು. ವಿಜ್ಞಾನ ಸಂಘಧ ಅಧ್ಯಕ್ಷೆ ಉಪನ್ಯಾಸಕಿ ಕವಿತಾ ಅತಿಥಿ ಪರಿಚಯ ಮಾಡಿದರು. ಪ್ರೀತಿಕಾ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು

 

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ