ಪಶ್ಚಿಮ ಘಟ್ಟದ ಮಹತ್ವ ಅರಿವು ಅಗತ್ಯ: ದಿನೇಶ್ ಹೊಳ್ಳ

ಬಂಟ್ವಾಳ: ಹಿಮಾಲಯ ಮತ್ತು ಪಶ್ಚಿಮ ಘಟ್ಟಗಳು ಭಾರತದ ಎರಡು ಗೋಡೆಗಳು. ದಕ್ಷಿಣ ಭಾರತದ ಜೀವಾಳವೇ ಪಶ್ಚಿಮಘಟ್ಟಗಳು. ದಕ್ಷಿಣ ಭಾರತಕ್ಕೆ ಮಳೆಯನ್ನು ತರುವ ಪಶ್ಚಿಮಘಟ್ಟಗಳ ಮಹತ್ವವನ್ನು ಪ್ರತಿಯೊಬ್ಬ ವಿದ್ಯಾರ್ಥಿಯೂ ಅರಿತುಕೊಳ್ಳಬೇಕು ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ಸಂಚಾಲಕರಾದ ದಿನೇಶ್ ಹೊಳ್ಳ ಹೇಳಿದರು.

ಎಲ್ಲ ನದಿಗಳ ಮೂಲಗಳೂ ಪಶ್ಚಿಮಘಟ್ಟದಲ್ಲಿವೆ. ಹಾಗಾಗಿ ಪಶ್ಚಿಮಘಟ್ಟಗಳ ಅಳಿವು ಉಳಿವಿನ ಬಗ್ಗೆ ಎಲ್ಲಾ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು. ಮನುಷ್ಯರ ಹಾಗೆಯೇ ಪ್ರಾಣಿಗಳಿಗೂ ಬದುಕುವ ಹಕ್ಕು ಇದೆ ಎಂದು ಎಸ್.ವಿ.ಎಸ್.ಪದವಿಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ಆಶ್ರಯದಲ್ಲಿ ನಡೆದ ‘ಪಶ್ಚಿಮ ಘಟ್ಟಗಳ ಅಳಿವು-ಉಳಿವು’ ಉಪನ್ಯಾಸದಲ್ಲಿ ಮಾಹಿತಿ ನೀಡಿದರು.

ಜಾಹೀರಾತು

ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರತಿಯೊಬ್ಬ ವಿದ್ಯಾರ್ಥಿಯೂ ತಮ್ಮ ಪರಿಸರದ ಬಗ್ಗೆ ಕಾಳಜಿ ವಹಿಸಬೇಕು. ಪ್ರಕೃತಿಯ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಯುವ ಹಾಗೆ ಮಾಡಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಕೆ. ಜೀವನದಲ್ಲಿ ಪ್ರಗತಿ ಹೊಂದಬೇಕಾದರೆ ಪ್ರಕೃತಿಯೊಂದಿಗೆ ಅವಿನಾಭಾವ ಸಂಬಂಧ ಹೊಂದಬೇಕು ಎಂದರು.

ಉಪನ್ಯಾಸಕರಾದ ಬಾಲಕೃಷ್ಣ ಗೌಡ, ಚೇತನ್ ಮುಂಡಾಜೆ, ಪ್ರದೀಪ್ ಪೂಜಾರಿ, ಶಿವಪ್ರಸಾದ್. ಕಾವ್ಯಶ್ರೀ, ನಮಿತಾ ಬಿ.ಎಲ್. ಉಪಸ್ಥಿತರಿದ್ದರು.ವಿಜ್ಞಾನ ಸಂಘದ ಕಾರ್ಯದರ್ಶಿ ವಿಲಾಸ್ ಸ್ವಾಗತಿಸಿ, ದಿಗಂತ್ ಎಸ್. ವಂದಿಸಿದರು. ವಿಜ್ಞಾನ ಸಂಘಧ ಅಧ್ಯಕ್ಷೆ ಉಪನ್ಯಾಸಕಿ ಕವಿತಾ ಅತಿಥಿ ಪರಿಚಯ ಮಾಡಿದರು. ಪ್ರೀತಿಕಾ ಕಾರ್ಯಕ್ರಮ ನಿರ್ವಹಿಸಿದರು.

 

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಪಶ್ಚಿಮ ಘಟ್ಟದ ಮಹತ್ವ ಅರಿವು ಅಗತ್ಯ: ದಿನೇಶ್ ಹೊಳ್ಳ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*