ಅನಿಲಕಟ್ಟೆಯಲ್ಲಿ ಎಜುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್

ವಿಟ್ಲ: ಬಡ ಹಾಗೂ ಅನಾಥ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಕರ್ನಾಟಕದಲ್ಲಿ ಪ್ರಥಮವಾಗಿ ವಿಟ್ಲ ಸಮೀಪದ ಅನಿಲಕಟ್ಟೆಯಲ್ಲಿ ಎಜ್ಯುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಕೇರಳದ ಮಡವೂರ್ ಸಿ.ಎಂ. ವಲಿಯುಲ್ಲಾಹಿ ಮಖಾಂ ಶರೀಫ್ ಅದೀನದಲ್ಲಿ ಮಡವೂರ್ ಸಿ.ಎಂ. ವಲಿಯುಲ್ಲಾಹಿ ಮಖಾಂ ಯಾತೀಂಖಾನ್ ಸಮಿತಿ ಮುಂದಾಗಿದೆ ಎಂದು ಸಮಿತಿಯ ಕನ್ವೀನರ್ ಸಿ.ಎಚ್ ಇಬ್ರಾಹಿಂ ಮುಸ್ಲಿಯಾರ್ ಪರ್ತಿಪ್ಪಾಡಿ ಹೇಳಿದರು.

ಧಾರ್ಮಿಕ ಪಠ್ಯದ ಜತೆಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣದ ವ್ಯವಸ್ಥೆಯನ್ನು ಸುಮಾರು 50 ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದಿಂದಲೇ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಮಹಿಳಾ ಕಾಲೇಜು ಪ್ರಾರಂಭಿಸುವ ಗುರಿ ಇಟ್ಟುಕೊಂಡು ಸುಮಾರು 1.4 ಎಕರೆ ಜಾಗವನ್ನು ಈಗಾಗಲೇ ಸಂಸ್ಥೆ ಖರೀದಿಸಿದೆ. ಮಡವೂರ್ ಸಿ.ಎಂ ಮಖಾಂ ಯತೀಂಖಾನ ಎಜ್ಯುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್‌ನ ಶಿಲಾನ್ಯಾಸ ಸಮಾರಂಭ ಡಿ.19ರ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಶುಕ್ರವಾರ ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ಶಿಲಾನ್ಯಾಸವನ್ನು ಸಯ್ಯದ್ ಸ್ವಾದಿಖಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ನೆರವೇರಿಸಲಿದ್ದಾರೆ. ತ್ವಾಖ ಅಹ್ಮದ್ ಮುಸ್ಲಿಯಾರ್ ಅಧ್ಯಕ್ಷತೆ ವಹಿಸಲಿದ್ದು, ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ಪ್ರಮುಖ ಪ್ರಭಾಷಣ ನಡೆಸಲಿದ್ದಾರೆ. ದುಆ ವನ್ನು ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲ್ ನೆರವೇರಿಸಲಿದ್ದು, ಹಾಜಿ ಯು ಶರಪುದ್ದೀನ್ ಮಾಸ್ಟರ್, ಸಯ್ಯದ್ ಹುಸೈನ್ ಬಾಲಅವಿ ತಂಙಳ್ ಕುಕ್ಕಾಜೆ, ಜಬ್ಬಾರ್ ಮಸ್ತಾನ್ ಮೂಳೂರು, ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ, ಆಹಾರ ಸಚಿವ ಯು. ಟಿ. ಖಾದರ್, ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಮಂಜೇಶ್ವರ ಶಾಸಕ ಪಿ.ಬಿ ಅಬ್ದುಲ್ ರಝಾಕ್, ಕರ್ನಾಟಕ ಗೇರು ಸಂಶೋಧನಾ ಸಮಿತಿಯ ಬಿ.ಎಚ್ ಖಾದರ್, ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್ ಮಹಮ್ಮದ್, ವಿಟ್ಲ ಪಟ್ಟಣ ಪಂಚಾಯಿತಿ ಅಧ್ಯಕ್ಷ ಅರುಣ ವಿಟ್ಲ, ಸದಸ್ಯೆ ಸಂಧ್ಯಾ ಮೋಹನ್ ಇನ್ನಿತರ ಉಲಮಾ-ಉಮರ ಹಾಗೂ ರಾಜಕೀಯ ನೇತಾರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಜಾಹೀರಾತು

ಪತ್ರಿಕಾಗೋಷ್ಠಿಯಲ್ಲಿ ಚೇರ್‌ಮಾನ್ ಸಯ್ಯದ್ ಹುಸೈನ್ ಬಾಲಅವಿ ತಂಙಳ್ ಕುಕ್ಕಾಜೆ, ಜತೆ ಕನ್ವಿನರ್‌ಗಳಾದ ಕೆ.ಎ ಹಸೈನಾರ್ ಮುಸ್ಲಿಯಾರ್, ಶಮೀರ್ ಪಳಿಕೆ, ಅಬೂಬಕ್ಕರ್ ಅನಿಲಕಟ್ಟೆ ಉಪಸ್ಥಿತರಿದ್ದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಅನಿಲಕಟ್ಟೆಯಲ್ಲಿ ಎಜುಕೇಶನಲ್ ಮತ್ತು ಕಲ್ಚರಲ್ ಕಾಂಪ್ಲೆಕ್ಸ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*