ವಿಟ್ಲ

ಕರೋಪಾಡಿ ಹಲ್ಲೆ: ಎರಡೂ ಕಡೆಯಿಂದ ಪ್ರಕರಣ ದಾಖಲು

www.bantwalnews.com ವರದಿ

ಶುಕ್ರವಾರ ರಾತ್ರಿ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಶನಿಪೂಜೆಗೆ ಎಂದು ಸಿದ್ಧಪಡಿಸಿದ್ದ ಜಾಗದಲ್ಲಿ ಬೈಕ್ ನಲ್ಲಿ ಬಂದ ವ್ಯಕ್ತಿಗಳು ಧೂಳೆಬ್ಬಿಸಿದ ವಿಚಾರಕ್ಕೆ ಸಂಬಂಧಿಸಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿ ಎರಡೂ ಕಡೆಯಿಂದ ಪ್ರಕರಣ ದಾಖಲಾಗಿವೆ.

ಜಾಹೀರಾತು

ವಿಟ್ಲ ಠಾಣೆಗೆ ಸಲ್ಲಿಸಲ್ಪಟ್ಟ ದೂರಿನಲ್ಲಿರುವ ಮಾಹಿತಿಯಂತೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮಿತ್ತನಡ್ಕದಲ್ಲಿ ಶನಿವಾರ ನಡೆಯಲಿದ್ದ ಸಾಮೂಹಿಕ ಶನಿಪೂಜಾ ಕಾರ್ಯಕ್ರಮ ಅಂಗವಾಗಿ ಜಗಶ್ರೀ ನವೋದಯ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಯುವಕರು ಶುಕ್ರವಾರ ಸಂಜೆ ತೋರಣ ಕಟ್ಟುವುದು, ಶಾಮಿಯಾನ ಹಾಕುವುದು ಇತ್ಯಾದಿ ಕೆಲಸ ಮಾಡಿಕೊಂಡಿದ್ದ ಸಂದರ್ಭ ಬೈಕಿನಲ್ಲಿ ಬಂದವರು ಧೂಳೆಬ್ಬಿಸಿದರು, ಇದನ್ನು ಪ್ರಶ್ನಿಸಿದ್ದಕ್ಕೆ ಹಲ್ಲೆ ನಡೆಸಿದ್ದಾಗಿ ದೂರಲಾಗಿದೆ. ಧೂಳೆಬ್ಬಿಸದಿರುವಂತೆ ಮನವಿ ಮಾಡಿದ್ದಕ್ಕೆ ರಾತ್ರಿ ಖಲೀಲ್ ಎಂಬಾತ ಸಹಚರರನ್ನು ಕರೆದುಕೊಂಡು ಬಂದು ರಾಜೇಶ್ ಎಂಬವರಿಗೆ ನಿಂದಿಸಿದ್ದಾಗಿ ದೂರಲಾಗಿದೆ. ಈ ಸಂದರ್ಭ ರಾಡ್, ದೊಣ್ಣೆಯಿಂದ ಹೊಡೆಯಲಾಗಿದೆ, ಬಿಡಿಸಲು ಬಂದ ರಮೇಶ್ ಎಂಬವರಿಗೂ ಹಲ್ಲೆ ನಡೆಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸಂಬಂಧ ಪ್ರತಿದೂರು ಸಲ್ಲಿಸಲಾಗಿದ್ದು, ಅದರಂತೆ ದೇವಸ್ಯ ನಿವಾಸಿ ಖಲೀಲ್ ಸ್ನೇಹಿತರೊಂದಿಗೆ ಬಾಯಾರು ಮಸೀದಿಯ ಸ್ವಲಾತ್ ಕಾರ್ಯಕ್ರಮಕ್ಕೆ ಹೋಗುವ ಸಂದರ್ಭ, ಮಿತ್ತನಡ್ಕದಲ್ಲಿ ನಿಂತ ಸಮಯ ದೂಳೆಬ್ಬೆಸಿದ ವಿಚಾರದಲ್ಲಿ ರಾಜೇಶ್ ಕತ್ತಿಯಿಂದ ಕಡಿಯಲು ಬಂದು ಕೈಗೆ ತಾಗಿದೆ ಎಂದು ತಿಳಿಸಲಾಗಿದೆ.

ಘಟನೆಯಲ್ಲಿ ಗಾಯಾಳುಗಳಾದ ಮಿತ್ತನಡ್ಕ ನಿವಾಸಿ ರಾಜೇಶ್ ನಾಯಕ್ (38), ರಮೇಶ್ (38) ಪುತ್ತೂರು ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನಾ ಸ್ಥಳದಲ್ಲಿ ಬಿಗಿ ಬಂದೋ ಬಸ್ತು ಕಲ್ಪಿಸಲಾಗಿದ್ದು, ಹಿರಿಯ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 hours ago