ವಿಟ್ಲ

ಜೆಡ್ಡು ಪದ್ಮಗಿರಿಯಲ್ಲಿ 22ರಂದು ಧನ್ವಂತರಿ ದೇವರ ಆಧಾರಶಿಲಾ ನಿಧಿಕಲಶ ಸ್ಥಾಪನೆ

ಅಳಿಕೆ ಗ್ರಾಮದ ಜೆಡ್ಡು ಪದ್ಮಗಿರಿಯಲ್ಲಿ ನಿರ್ಮಾಣವಾಗಲಿರುವ ಶ್ರೀ ಆದಿಧನ್ವಂತರಿ ಕ್ಷೇತ್ರದ ಶ್ರೀ ಧನ್ವಂತರಿ ದೇವರ ನಿಧಿಕಲಶದ ಬೃಹತ್ ಮೆರವಣಿಗೆ ಕಾರ್ಯಕ್ರಮ ಡಿ.20 ಹಾಗೂ 21 ರಂದು ನಡೆದು, ಡಿ.22ರಂದು ಶ್ರೀ ಧನ್ವಂತರಿ ದೇವರ ಆಧಾರಶಿಲಾ ನಿಧಿಕಲಶ ಸ್ಥಾಪನಾದಿ ಕಾರ್ಯಗಳು ಪ್ರಧಾನ ಆಚಾರ್ಯ ವೇದಮೂರ್ತಿ ಅಮೈ ಸುಬ್ಬಣ್ಣ ಭಟ್ ಹಾಗೂ ತಂತ್ರಿಗಳಾದ ಶಿವರಾಮ ಭಟ್ ಪೆರಡಾಲ ನೇತೃತ್ವದಲ್ಲಿ ನಡೆಯಲಿದೆ.

ಡಿ.22ರಂದು 11 ಗಂಟೆಗೆ ಸಭಾಕಾರ್ಯಕ್ರಮ ನಡೆಯಲಿದ್ದು, ಮಂಗಳೂರು ಶ್ರೀ ರಾಮಕೃಷ್ಣಾಶ್ರಮದ ಶ್ರೀ ಜಿತಕಾಮಾನಂದಜೀ ಸ್ವಾಮೀಜಿ ಉಪಸ್ಥಿತರಿರಲಿದ್ದು, ಬೆಂಗಳೂರಿನ ಖ್ಯಾತ ವೇದವಿದ್ವಾಂಸ ವಸಂತರಾಮ ವಾದ್ಯರ್ ಸಭೆಯನ್ನು ಉದ್ಘಾಟಿಸಲಿರುವರು. ಅರಣ್ಯ ಸಚಿವ ಬಿ ರಮಾನಾಥ ರೈ ಸಭಾಧ್ಯಕ್ಷತೆ ವಹಿಸಲಿದ್ದು, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕಿ ಶಕುಂತಳಾ ಟಿ ಶೆಟ್ಟಿ, ವಿಧಾನಪರಿಷತ್ತು ಸದಸ್ಯ ಕ್ಯಾ. ಗಣೇಶ ಕಾರ್ಣಿಕ್, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಿವಾಸ ರಾವ್ ಮತ್ತಿತರರು ಭಾಗವಹಿಸಲಿದ್ದಾರೆ.

ಶ್ರೀ ಧನ್ವಂತರಿ ದೇವರ ನಿಧಿಕಲಶ ಮೆರವಣಿಗೆ ಏಳು ಗ್ರಾಮಗಳ 41 ಕ್ಷೇತ್ರಗಳಲ್ಲಿ ಸಾಗಲಿದ್ದು, ಸರ್ವಧರ್ಮಸಮನ್ವತೆಯಿಂದ ಮಸೀದಿ, ಚರ್ಚ್, ಜೈನ ಬಸದಿ, ದೇವಾಲಯಗಳಲ್ಲಿ ಸಾಗಲಿದೆ.ಡಿ.20ರಂದು ಬೆಳಗ್ಗೆ 7ರಿಂದ ಅಳಿಕೆ ನೆಕ್ಕಿತಪುಣಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಿಂದ ನಿಧಿಕಲಶ ಮೆರವಣಿಗೆ ಆರಂಭಗೊಂಡು ವಿಟ್ಲ ಶ್ರೀ ಮಹತೋಬಾರ ಪಂಚಲಿಂಗೇಶ್ವರ ಕ್ಷೇತ್ರ ದಲ್ಲಿ ಶ್ರೀ ಜನಾರ್ದನ ವರ್ಮ ಅರಸರಿಂದ, ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮಿ ಕ್ಷೇತ್ರದಲ್ಲಿ ಶ್ರೀ ಮೋಹನದಾಸ ಸ್ವಾಮೀಜಿಯರು ನಿಧಿಕಲಶ ಪೂಜೆ,  ಬಾಳೆಕೋಡಿ ಶ್ರೀ ಶಿಲಾಂಜನ ಕ್ಷೇತ್ರದಲ್ಲಿ ಶ್ರೀ ಶಶಿಕಾಂತ ಮಣಿ ಸ್ವಾಮೀಜಿಯವರಿಂದ, ಕಣಿಯೂರು ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಶ್ರೀ ಮಹಾಬಲ ಸ್ವಾಮೀಜಿಯವರಿಂದ ನಿಧಿಕಲಶ ಪೂಜೆ ನಡೆಯಲಿದೆ.

ಜಾಹೀರಾತು

ಡಿ.21ರಂದು ಬೆಳಗ್ಗೆ 8ರಿಂದ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದಲ್ಲಿ ಶ್ರೀ ಗುರುದೇವಾನಂದ ಸ್ವಾಮೀಜಿಯವರಿಂದ, ಕನ್ಯಾನ ಭಾರತ ಸೇವಾಶ್ರಮದಲ್ಲಿ ಈಶ್ವರ ಭಟ್ ಅವರಿಂದ, ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ವಿದ್ಯಾಸಂಸ್ಥೆಯಲ್ಲಿ ಯು ಗಂಗಾಧರ ಭಟ್ ಇವರಿಂದ, ಆಲಂಗಾರು ಶ್ರೀ ಮೂಕಾಂಬಿಕಾ ಕ್ಷೇತ್ರದಲ್ಲಿ ಪದ್ಮಿನಿ ರಾಮ ಭಟ್ ಇವರಿಂದ ನಿಧಿಕಲಶ ಪೂಜೆ ನೆರವೇರಿಸಿಕೊಂಡು ದೇಲಂತಬೆಟ್ಟು ಸಂತ ಪೌಲರ ಇಗರ್ಜಿ, ಬೈರಿಕಟ್ಟೆ ಜಲಾಲಿಯಾ ಜುಮ್ಮಾ ಮಸೀದಿ ಮೂಲಕ ಸಾಗಿ ಪದ್ಮಗಿರಿ ಕ್ಷೇತ್ರಕ್ಕೆ ಬರಲಿದೆ ಎಂದು ಜೆಡ್ಡು ಆಯುರ್ವೇದ ಸೇವಾಟ್ರಸ್ಟಿನ ಕಾರ್ಯದರ್ಶಿ ಡಾ. ಜೆಡ್ಡು ಗಣಪತಿ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago