ಬಂಟ್ವಾಳ

ಸಾಧಕ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ವತಿಯಿಂದ ಸನ್ಮಾನ

www.bantwalnews.com ವರದಿ

ಬಂಟ್ವಾಳದಲ್ಲಿ ಕಾರ್ಯನಿರತರಾಗಿರುವ ಬಂಟ್ವಾಳ ತಾಲೂಕಿನ ಪತ್ರಕರ್ತರ ಸಂಘದ ಅಧ್ಯಕ್ಷ ಕನ್ನಡಪ್ರಭ ಬಂಟ್ವಾಳ ವರದಿಗಾರ ಮೌನೇಶ್ ವಿಶ್ವಕರ್ಮ ಅವರ ಕಲ್ಲವ್ವನ ಕನಸು ನಾಟಕ ನಿರ್ದೇಶನಕ್ಕಾಗಿ ಜಿಲ್ಲಾ ಮಟ್ಟದ ಪ್ರಶಸ್ತಿ, ಜಿಲ್ಲಾ ಮಟ್ಟದ ರಂಗಧ್ವನಿ ಮಕ್ಕಳ ಶಿಬಿರಕ್ಕೆ ನಿರ್ದೇಶನಕ್ಕೆ ಆಯ್ಕೆಯಾಗಿದ ಹಿನ್ನೆಲೆ ಮತ್ತು  ವಿಜಯವಾಣಿ ಬಂಟ್ವಾಳ ವರದಿಗಾರ, ತಾಲೂಕು ಪತ್ರಕರ್ತರ ಸಂಘದ ಕೋಶಾಧಿಕಾರಿ ಸಂದೀಪ್ ಸಾಲ್ಯಾನ್ ಅವರಿಗೆ ಕರೆಂಕಿಶ್ರೀ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಹಿನ್ನೆಲೆಯಲ್ಲಿ ಭಾನುವಾರ ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ ಕ್ಲಬ್ ಡೇ ಸಂದರ್ಭ ಸನ್ಮಾನಿಸಲಾಯಿತು.

ಪ್ರತಿ ಸೋಮವಾರ ಮೌನೇಶ್ ವಿಶ್ವಕರ್ಮ ಅವರ ಅಂಕಣ ಮಕ್ಕಳ ಮಾತು www.bantwalnews.com ನಲ್ಲಿ ಪ್ರಕಟವಾಗುತ್ತಿದೆ. ಹಾಗೆಯೇ ಬಂಟ್ವಾಳ ತಾಲೂಕು ಮೂಲದ ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಇಬ್ಬರು ಪ್ರತಿಭಾನ್ವಿತ ಫೊಟೋಜರ್ನಲಿಸ್ಟ್ ಗಳಾದ ದಯಾ ಕುಕ್ಕಾಜೆ ಮತ್ತು ಅಪುಲ್ ಆಳ್ವ ಇರಾ ಅವರು ವಿವಿಧ ಕ್ಷೇತ್ರಗಳಲ್ಲಿ ಗಳಿಸಿದ ಪುರಸ್ಕಾರವನ್ನು ಗುರುತಿಸಿ ಶಾಸಕ ಮೊಯ್ದೀನ್ ಬಾವ, ಹಿರಿಯ ಪತ್ರಕರ್ತರಾದ ಮನೋಹರ್ ಪ್ರಸಾದ್, ಪ್ರೆಸ್ ಕ್ಲಬ್ ಅಧ್ಯಕ್ಷ ರೊನಾಲ್ಡ್ ಅನಿಲ್ ಫೆರ್ನಾಂಡೀಸ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ವಾರ್ತಾಧಿಕಾರಿ ಬಿ.ಎ.ಖಾದರ್ ಶಾ, ಹಿರಿಯ ಪತ್ರಕರ್ತರಾದ ಆನಂದ ಶೆಟ್ಟಿ ಮತ್ತು ಪುಷ್ಪರಾಜ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು. ಸನ್ಮಾನಿತರೆಲ್ಲರಿಗೂ ಬಂಟ್ವಾಳನ್ಯೂಸ್ ವತಿಯಿಂದ ಅಭಿನಂದನೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ