ತುಂಬೆ ಡ್ಯಾಂ ಸಂತ್ರಸ್ತರಿಗೆ ಏಕಗಂಟಿನಲ್ಲಿ ನ್ಯಾಯೋಚಿತ ಪರಿಹಾರ

ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರಿಂದ ಜಿಲ್ಲಾಡಳಿತಕ್ಕೆ ಆಗ್ರಹ

bantwalnews report

ಜಾಹೀರಾತು

ತುಂಬೆ ಹೊಸ ವೆಂಟೆಡ್ ಡ್ಯಾಂ ನಿರ್ಮಾಣದಿಂದ ಸುಮಾರು ಸಾವಿರಾರು ಎಕರೆ ಕೃಷಿ ಭೂಮಿ ಮುಳುಗಡೆಯಾಗಲಿದ್ದು ಎಂಟು ನೂರಕ್ಕಿಂತಲೂ ಅಧಿಕ ಕುಟುಂಬಗಳು ತೊಂದರೆ ಅನುಭವಿಸಲಿದ್ದು  ಜಮೀನು ಕಳೆದುಕೊಳ್ಳುವ ಎಲ್ಲಾ ರೈತರಿಗೆ ಏಕಗಂಟಿನಲ್ಲಿ ನ್ಯಾಯೋಚಿತ ಪರಿಹಾರ ನೀಡುವಂತೆ ಪ್ರಗತಿಪರ ಕೃಷಿಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

ಸಜೀಪಪಮೂಡ ಗ್ರಾಮದ ಅನ್ನಪ್ಪಾಡಿ ಎಂಬಲ್ಲಿ ಹಡಿಲುಗದ್ದೆಯಲ್ಲಿ ತುಳುನಾಡ ಕೃಷಿ ಕ್ರಾಂತಿಗೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಟಿ ನಡೆಸಿದ ಅವರು ಮಂಗಳೂರಿಗೆ ಕುಡಿಯುವ ನೂರು ಪೂರೈಕೆಗಾಗಿ ರೈತರ  ಯಾವುದೇ ವಿರೋಧವಿಲ್ಲದೆ  ತುಂಬೆ ನೂತನ ವೆಂಟೆಡ್ ಡ್ಯಾಂ ಕಾಮಗಾರಿ ಪೂರ್ಣಗೊಂಡಿದೆ. ಆದರೆ ಕೆಲವರನ್ನು ಮಾತ್ರ ವಿಶ್ವಾಸಕ್ಕೆ ಪಡೆದುಕೊಂಡು ಹೆಚ್ಚಿನ ರೈತರನ್ನು ಕತ್ತಲಲ್ಲಿಟ್ಟುಕೊಂಡು ಸರಕಾರ ನೀರು ಸಂಗ್ರಹಿಸಲು ಆರಂಭಿಸಿದೆ. ಪರಿಹಾರ ನೀಡಲು ಹೆಚ್ಚೆಂದರೆ 400 ಕೋಟಿ ರೂಪಾಯಿ ಬೇಕಾಗಬಹುದು. ಇಷ್ಟು ದೊಡ್ಡ ಯೋಜನೆ ನಡೆಸುತ್ತಿರುವಾಗ ಭೂ ಸ್ವಾದೀನ ಪ್ರಕ್ರಿಯೆಗೆಂದು ಹಣ ಮೀಸಲಿಡದಿರುವುದು ವಿಪರ್ಯಾಸ ಎಂದರು.

ಜಾಹೀರಾತು

ಒಂದು ಕಡೆಯಿಂದ ಡ್ಯಾಂ ಕಟ್ಟಿ ಕೃಷಿ  ಭೂಮಿ ಮುಳುಗಿಸುವುದು, ಇನ್ನೊಂದು ಕಡೆಯಿಂದ ಕೃಷಿಗೆ ನೀರು ಬಳಸದಂತೆ ಆದೇಶ ಹೊರಡಿಸಿ ಕೃಷಿಯನ್ನು ಒಣಗಿಸುವುದು ಯಾವ ನ್ಯಾಯ ಎಂದು ಪ್ರಶ್ನಿಸಿದ ಅವರು ಮಂಗಳೂರಿಗೆ ಕುಡಿಯುವ ನೀರು ಪೂರೈಕೆಗಾಗಿ ಅಣೆಕಟ್ಟು ಕಟ್ಟಿ ನೀರು ಸಂಗ್ರಹಿಸಲಾಗುತ್ತದೆ. ಆದರೆ ಸಹಸ್ರಾರು ವರ್ಷಗಳಿಂದ ಇದೇ ನದಿ ತೀರದಲ್ಲಿ ಕೃಷಿ ಮಾಡುವವರಿಗೆ ನದಿ ನೀರು ಬಳಸಲು ನಿರ್ಭಂದ ವಿಧಿಸಿರುವುದು ಸಮಂಜವಲ್ಲ. ನದಿ ಪಕ್ಕದ ಜಮೀನು ಹಸಿರಾಗಿದ್ದಾಗ ಮಾತ್ರ ನದಿಯಲ್ಲಿಯೂ ನೀರಿನ ಒರತೆ ಇರುತ್ತದೆ. ಕೃಷಿ ಭೂಮಿ ಬರಡಾಗಿದ್ದರೆ ನದಿಯೂ ಬರಡಾಗುತ್ತದೆ. ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವರಿಕೆ ಮಾಡಲಾಗುವುದು. ಆ ಬಳಿಕವೂ ತಮ್ಮ ಹಠ ಮುಂದುವರಿಸಿದರೆ ರೈತರೊಂದಿಗೆ ಸೇರಿ ಹೋರಾಟ ಮಾಡುವುದು ಅನಿವಾರ್ಯ ಎಂದು ಎಚ್ಚರಿಸಿದ್ದಾರೆ.

ರೈತ  ಸಂಘದ ಮುಖಂಡ ಸುಬ್ರಹ್ಮಣ್ಯ ಭಟ್ ಮಾತನಾಡಿ ದ.ಕ.ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆ ಒಡೆದು ಆಳುವ ನೀತಿ ಅನುಸರಿಸುತ್ತಿದೆ. ಮುಳಗಡೆಯಾಗುವ ಜಮೀನಿನ ಪಟ್ಟಿಯನ್ನು ಈವರೆಗೆ ಅವರು ನೀಡಿಲ್ಲ. ಮುಳುಗಡೆಯಾಗುವ ಜಮೀನನು ಖುದ್ದು ಭೇಟಿ ಮಾಡುವುದಾಗಿ ಜಿಲ್ಲಾಧಿಕಾರಿ ಹೇಳಿದ್ದರೂ ಈವರೆಗೆ ಸಜೀಪಮುನ್ನೂರಿಗೆ ಬಂದಿಲ್ಲ. ಪರಿಹಾರ ಕೊಟ್ಟ ಬಳಿಕವೇ ನೀರು ಸಂಗ್ರಹಿಸುವುದಾಗಿ ಹೇಳಿಕೊಂಡಿದ್ದರೂ ಇದೀಗ ಕನಿಷ್ಟ ಸೂಚನೆ ನೀಡದೆ ನೀರು ನಿಲ್ಲಿಸಿದ್ದಾರೆ. ಇದರಿಂದಾಗಿ ಬಿ.ಮೂಡ ಗ್ರಾಮದ ತಿಮಪ್ಪ ರೈ ಎಂಬವರ 1 ಎಕರೆ ಕೃಷಿ ಭೂಮಿ ಮುಳುಗಡೆಯಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಜಿ.ಪಂ.ಸದಸ್ಯ ತುಂಗಪ್ಪ ಬಂಗೇರ, ರೈತ ಸಂಘದ ಪ್ರಮುಖರಾದ ಮನೋಹರ ಶೆಟ್ಟಿ, ಸುಬ್ರಹ್ಮಣ್ಯ ಭಟ್, ಎನ್.ಕೆ. ಇದಿನಬ್ಬ, ಸುದೇಶ್ ಮಯ್ಯ, ಶರತ್ ಕುಮಾರ್, ತಾ.ಪಂ.ಮಾಜಿ ಅಧ್ಯಕ್ಷ ಯಶವಂತ ದೇರಾಜೆ ಮತ್ತಿತರರು ಹಾಜರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ತುಂಬೆ ಡ್ಯಾಂ ಸಂತ್ರಸ್ತರಿಗೆ ಏಕಗಂಟಿನಲ್ಲಿ ನ್ಯಾಯೋಚಿತ ಪರಿಹಾರ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*